RCB ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ: ಸಿಎಂಗೆ ಅಭಿಮಾನಿ ಪತ್ರ

ಬೆಳಗಾವಿ : ಪ್ಲೇ ಆಫ್ನಲ್ಲಿ ಪಂಜಾಬ್ಗೆ ಸೋಲುಣಿಸಿದ ಆರ್ಸಿಬಿ ತಂಡ ಭರ್ಜರಿಯಾಗಿ ಫೈನಲ್ಗೆ ಎಂಟ್ರಿಕೊಟ್ಟಿದೆ. 18 ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿಗಳ ಕಪ್ ಗೆಲುವಿನ ಕನಸಿಗೆ ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಈ ಬಾರಿ ಟ್ರೋಫಿ ನಮ್ದೇ ಅನ್ನೋ ಮಹಾ ಸಂದೇಶ ರವಾನಿಸಲು ಮುಂದಾಗಿರುವ ಈ ಸಂದರ್ಭದಲ್ಲಿ ಓರ್ವ ಅಭಿಮಾನಿ ಆರ್ಸಿಬಿ ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ ಒಂದು ದಿನ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

 

ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಆರ್ಸಿಬಿ ಅಭಿಮಾನಿಯಾಗಿದ್ದು, ಆರ್ಸಿಬಿ ಕಪ್ಪು ಗೆದ್ದ ದಿನ ಪ್ರತಿ ವರ್ಷ ರಜೆ ನೀಡಬೇಕು. ಎಲ್ಲಾ ಜಿಲ್ಲೆಯಲ್ಲೂ ಆಚರಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಆರ್ಸಿಬಿ ಫೈನಲ್ ತಲಪುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪತ್ರದಲ್ಲೇನಿದೆ?


ಐಪಿಎಲ್ ಪಂದ್ಯದಲ್ಲಿ ಒಂದು ವೇಳೆ ಆರ್ಸಿಬಿ ತಂಡ ಫೈನಲ್ಗೆ ಹೋಗಿ ಕಪ್ ಗೆದ್ದರೇ ಆ ದಿನ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್ಸಿಬಿ ಫ್ಯಾನ್ಸ್ ಹಬ್ಬ’ ಅಂತ ಅಧೀಕೃತವಾಗಿ ಘೋಷಿಸಿ ಪ್ರತಿವರ್ಷ ಸರ್ಕಾರ ರಜೆ ನೀಡಬೇಕು. ಏಕೆಂದರೆ ಆರ್ಸಿಬಿ ಫ್ಯಾನ್ಸ್ಗಳ ಬಹುದಿನದ ಕನಸು ನನಸಾಗಲಿದ್ದು, ಕರ್ನಾಟಕ ರಾಜ್ಯೋತ್ಸವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸುತ್ತೇವೋ ಅದೇ ರೀತಿ ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸುವುದಕ್ಕೆ ಕರ್ನಾಟಕ ಸರ್ಕಾರ ಅನುವು ಮಾಡಿಕೊಡಬೇಕೆಂದು ವಿನಂತಿ ಮಾಡಿಕೊಳ್ಳುತ್ತೇವೆ.
ಇದನ್ನು ಕರ್ನಾಟಕ ಸರ್ಕಾರ ಗಣನೀಯವಾಗಿ ತೆಗೆದುಕೊಂಡು ರಜೆ ಮತ್ತು ಆರ್ಸಿಬಿ ಫ್ಯಾನ್ಸ್ ಹಬ್ಬ ಆಚರಿಸುವುದಕ್ಕೆ ಪರವಾಣಿಗೆ ಕೊಡಬೇಕೆಂದು ಎಲ್ಲಾ ಆರ್ಸಿಬಿ ಫ್ಯಾನ್ಸ್ ಪರವಾಗಿ ಕಳಕಳಿಯ ವಿನಂತಿ ಮಾಡಿಕೊಳ್ಳುತ್ತೇವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!