RCB ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ : ಬಿ.ದಯಾನಂದ್.

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದ್ದು ಇಂದು ಫೈನಲ್ ಪಂದ್ಯ ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಆರ್ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿವೆ. ಈ ಮಧ್ಯೆ ಇಂದು ಆರ್ ಸಿಬಿ ಫೈನಲ್ ಪಂದ್ಯ ಗೆದ್ದು ಟ್ರೋಫಿ ತನ್ನದಾಗಿಸಿಕೊಂಡರೇ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಜೋರಾಗಿರುತ್ತದೆ. ಹೀಗಾಗಿಯೇ RCB ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಮಾಡಬಾರದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

 

 

 

 

 

 

 

 

 

ಆರ್ ಸಿಬಿ ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ನಿರ್ದೇಶನ ನೀಡಿದ್ದಾರೆ.
ಆರ್ಸಿಬಿ ಗೆದ್ದರೆ ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುವಂತಿಲ್ಲ. ರಸ್ತೆ ತಡೆಯುವುದು, ಟೈರ್ಗೆ ಬೆಂಕಿ ಹಚ್ಚುವುದು, ವಾಹನ ತಡೆಯುವುದು. ಸಾರ್ವಜನಿಕರಿಗೆ ತೊಂದರೆ, ಶಾಂತಿಭಂಗ ಉಂಟು ಮಾಡುವಂತಿಲ್ಲ. ಈ ಬಗ್ಗೆ ನಿಗಾ ವಹಿಸುವಂತೆ ಡಿಸಿಪಿ, ಎಸಿಪಿಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

 

 

 

 

 

 

 

ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಲಾಗಿದೆ. ಎಂ.ಜಿ.ರಸ್ತೆ, ಕೋರಮಂಗಲ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನಿಗಾ ಹೆಚ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್ ಅಳವಡಿಕೆ ಮಾಡುವಂತಿಲ್ಲ ಎಂದು ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ. ಹಾಗೆಯೇ ಪಬ್, ಕ್ಲಬ್, ರೆಸ್ಟೋರೆಂಟ್ ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್ ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲೆಡೆ ಹೊಯ್ಸಳ ಮತ್ತು ಬೀಟ್ ಪೊಲೀಸರು ಗಸ್ತು ಕಾರ್ಯಾಚರಣೆ ಹೆಚ್ಚಿಸಿ ನಿಗಾ ವಹಿಸಲಿದ್ದಾರೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!