ಕೊನೆಗೂ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾವನ್ನು ಚಾಂಪಿಯನ್ಸ್ ಟ್ರೋಫಿಯಿಂದ ಹೊರಕಳಿಸಿದ್ದು, ಫೈನಲ್‌ಗೆ ಭರ್ಜರಿ ಪ್ರವೇಶ ಪಡೆದುಕೊಂಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 49.3 ಓವರ್ ಗಳಲ್ಲಿ 264 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ನಾಯಕ ಸ್ಟೀವ್ ಸ್ಮಿತ್ 73 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾಗೆ ನೆರವಾದರು. ಟ್ರಾವಿಸ್ ಹೆಡ್ 33 ಎಸೆತಗಳಲ್ಲಿ 39 ರನ್ ಗಳಿಸಿ ಅಪಾಯಕಾರಿಯಾಗಿದ್ದಾ ವರುಣ್ ಚಕ್ರವರ್ತಿ ಅವರನ್ನು ಔಟ್ ಮಾಡಿ ಭಾರತದ ಆತಂಕ ದೂರ ಮಾಡಿದರು.

265 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಶುಭಮನ್ ಗಿಲ್ 8 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ 29 ಎಸೆತಗಳಲ್ಲಿ 28 ರನ್ ಗಳಿಸಿದರು. 43 ರನ್ ಗಳಿಸುವಷ್ಟರಲ್ಲಿ ಭಾರತ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು. ಮೂರನೇ ವಿಕೆಟ್‌ಗೆ ಈ ಜೋಡಿ 91 ರನ್‌ಗಳ ಜೊತೆಯಾಟ ಆಡಿದರು. ಶ್ರೇಯಸ್ ಅಯ್ಯರ್ 62 ಎಸೆತಗಳಲ್ಲಿ 45 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ 30 ಎಸೆತಗಳಲ್ಲಿ 27 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ ಮೂರು ಭರ್ಜರಿ ಸಿಕ್ಸರ್ ಸಹಿತ 28 ರನ್ ಗಳಿಸಿದರು. ಕೆಎಲ್ ರಾಹುಲ್ 34 ಎಸೆತಗಳಲ್ಲಿ ಅಜೇಯ 42 ರನ್ ಗಳಿಸಿದರು. ರವೀಂದ್ರ ಜಡೇಜಾ 2 ರನ್ ಗಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!