
ಪರಿಹಾರ ಮಾಡಿಕೊಂಡರೆ ಆಪತ್ತು ತಪ್ಪಬಹುದು ಎಂದು ಹೇಳಿರುವ ಸ್ವಾಮೀಜಿ, ಯುಗಾದಿ ನಂತರ ಮಳೆ, ಬೆಳೆ ಬಗ್ಗೆ ನಿರ್ಧಾರ ಆಗುತ್ತದೆ. ಸಂಕ್ರಾಂತಿಯಲ್ಲಿ ರಾಜ್ಯಕ್ಕೆ ಮತ್ತು ದೊಡ್ಡ ದೊಡ್ಡ ವ್ಯಾಪಾರಸ್ಥರಿಗೆ ಇಂಥಹ ವ್ಯಾವಹಾರಿಕ ವಿಷಯಗಳು ಬರುತ್ತವೆ. ಹೀಗಾಗಿ ಸಂಕ್ರಾಂತಿವರೆಗೆ ಏನೂ ತೊಂದರೆ ಇಲ್ಲ, ಸಂಕ್ರಾಂತಿ ಫಲವನ್ನು ನೋಡಿ ಹೇಳಬೇಕಾಗುತ್ತದೆ ತಿಳಿಸಿದ್ದಾರೆ.
ಯುದ್ಧಗಳು ಮುಂದುವರಿಯಲಿವೆ. ಮನಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ. ಮನುಷ್ಯ ಮೌನವಾಗಿದ್ದರೆ ಹೆಚ್ಚು ಜ್ಞಾನ ಸಂಪಾದನೆ ಮಾಡಬಹುದು. 84 ಲಕ್ಷ ಜೀವ ರಾಶಿಗಳಲ್ಲಿ ಆತ್ಮ ಕಡೆಯದಾಗಿದ್ದು, ಮಾನವನಿಗೆ ಜ್ಞಾನ ಹಾಗೂ ವಿವೇಕ ನೀಡಲಾಗಿದೆ. ಇದನ್ನು ಸನ್ಮಾರ್ಗದಲ್ಲಿ ಬಳಸಿಕೊಂಡಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಧ್ಯಾನ ಕೇಂದ್ರಗಳು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಬೆಳವಣಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.




