2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು.

ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಈ ಘಟನೆ ಜನವರಿ 2023 ರಲ್ಲಿ ನಡೆದಿತ್ತು. ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಮಾದಕವಸ್ತು ಸೇವನೆ ಮಾಡಿ, ಫೋನ್​​ ಅಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದರು.

ಅವರು 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಚಾಲನೆ ಮಾಡುತ್ತಿದ್ದರು. ನಂತರ ಅಧಿಕಾರಿಗೆ ಅಜಾಗರೂಕ ಚಾಲನೆಗಾಗಿ 5,000 ಡಾಲರ್ ದಂಡ ವಿಧಿಸಲಾಯಿತು. ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಯಿತು. ಆದಾಗ್ಯೂ, ಕಿಂಗ್ ಕೌಂಟಿ ಪ್ರಾಸಿಕ್ಯೂಟರ್‌ಗಳು ಅಧಿಕಾರಿ ಉದ್ದೇಶಪೂರ್ವಕವಾಗಿ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಿಲ್ಲ.

ಮತ್ತೊಬ್ಬರ ಬಾಡಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದ ದೃಶ್ಯಗಳು ಬೆಳಕಿಗೆ ಬಂದಾಗ ವಿಷಯ ತುಂಬಾ ಗಂಭೀರವಾಯಿತು. ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯದಲ್ಲಿ ಇತ್ಯರ್ಥ ಅರ್ಜಿ ಸಲ್ಲಿಸಲಾಗಿದೆ. ಕುಟುಂಬದ ವಕೀಲರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಇತ್ಯರ್ಥವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡುತ್ತದೆ ಎಂದು ನಂಬಿದ್ದೇವೆಂದು ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು