ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ!

 

ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸೌದೆ ಒಲೆಯತ್ತ ಮುಖ ಮಾಡಿದ್ದು, ಇಂದಿರಾ ಕ್ಯಾಂಟಿನ್​​​ಗಳಲ್ಲಿ ಸೌದೆ ಒಲೆ ಮೇಲೆ ಅಡುಗೆ ಮಾಡಲಾಗಿದೆ.

ಕಲಬುರಗಿ, ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ನಮ್ಮ ರಾಜ್ಯಕ್ಕೂ ಅದರ ಪರಿಣಾಮ ನೇರವಾಗಿ ತಟ್ಟಿದೆ. ಸಿಲಿಂಡರ್​ಗಳ (LPG cylinder) ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದೆ. ಇತ್ತ ಕಲಬುರಗಿಯಲ್ಲಿ ಇಂದಿರಾ ಕ್ಯಾಂಟಿನ್ ಅಡುಗೆ ಮಾಡುವುದಕ್ಕೆ ಸೌದೆ ಒಲೆಯೇ ಗತಿ ಎನ್ನುವಂತಾಗಿದೆ.

ಕಳೆದ ಹತ್ತು ದಿನಗಳಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಅದು ಎಲ್​ಲಿಜಿ ಸಿಲಿಂಡರ್​ಗಳ ಮೇಲೆ ನೇರ ಪರಿಣಾಮ ಬೀರಿದ. ಇರಾನ್ – ಇಸ್ರೇಲ್ ಯುದ್ದದಿಂದ ಕಲಬುರಗಿಯಲ್ಲಿಯೂ ನಿನ್ನೆಯಿಂದಲೇ ಕಮರ್ಷಿಯಲ್ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ.

ಇಂದಿರಾ ಕ್ಯಾಂಟಿನ್​​ಗೂ ಸಿಲಿಂಡರ್ ಸಪ್ಲೈ ಬಂದ್ ಆದ ಹಿನ್ನಲೆ ಸಿಬ್ಬಂದಿ ಸೌದೆ ಒಲೆ ಮೊರೆ ಹೋಗಿದ್ದಾರೆ. ಕಲಬುರಗಿ ನಗರದ ಎಂಟು ಇಂದಿರಾ ಕ್ಯಾಂಟಿನ್​​ಗಳಿಗೂ ಸೌದೆ ಒಲೆ ಮೇಲೆಯೇ ಅಡುಗೆ ಮಾಡಲಾಗಿದೆ. ಏಕೆಂದರೆ ನಿನ್ನೆಯವರೆಗೂ ತಮ್ಮ ಬಳಿ ಇದ್ದ ಸಿಲಿಂಡರ್​​ಗಳ ಮೂಲಕ ಸಿಬ್ಬಂದಿ ಅಡುಗೆ ಮಾಡಿದ್ದಾರೆ. ಆದರೆ ಸಿಲಿಂಡರ್ ಸಿಗದ ಕಾರಣ, ಬೆಳಿಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಮತ್ತು ರಾತ್ರಿ ಊಟವನ್ನ ಸೌದೆ ಒಲೆಯಲ್ಲಿಯೇ ಮಾಡಿದ್ದಾರೆ.

ಅಷ್ಟೆ ಅಲ್ಲದೇ ಚಪಾತಿಯನ್ನ ಹೊರಗಡೆಯಿಂದ ಖರೀದಿ ಮಾಡಿ ಜನರಿಗೆ ನೀಡಿದ್ದಾರೆ. ಇನ್ನು ಆಸ್ಪತ್ರೆಗಳ ಪಕ್ಕ ಇರುವ ಇಂದಿರಾ ಕ್ಯಾಂಟಿನ್​ನಲ್ಲಿ ಇಡ್ಲಿ, ಸಾಂಬರ್​ಗೆ ಹೆಚ್ಚಿನ ಬೇಡಿಕೆಯಿದೆ. ಆದರೆ ಸಿಲಿಂಡರ್ ಇಲ್ಲದ ಪರಿಣಾಮ ಕೇವಲ ಉಪ್ಪಿಟ್ಟು, ಅವಲಕ್ಕಿ ಮಾಡಲಾಗುತ್ತಿದೆಯಂತೆ. ಸೌದೆ ಒಲೆ ಮೇಲೆ ಅಡುಗೆ ಮಾಡುವುದಕ್ಕೆ ಕೆಲಸಗಾರರು ಮುಂದೆ ಬರ್ತಿಲ್ಲ, ಆದರೆ ಬಡವರು ಉಪವಾಸ ಇರಬಾರದು ಎನ್ನುವ ಕಾರಣಕ್ಕೆ ನಾವೇ ಅಡುಗೆ ಮಾಡುತ್ತಿದ್ದೇವೆ ಎಂದು ಸಿಬ್ಬಂದಿ ಬಸವರಾಜ್​​ ಹೇಳುತ್ತಾರೆ.

ರಾಜ್ಯದಲ್ಲಿ ಯಾವಾಗ ಸಿಲಿಂಡರ್​​ಗಳ ಸಮಸ್ಯೆ ಉದ್ಭವವಾಯ್ತೋ, ಅಲ್ಲಿಗೆ ಹೋಟೆಲ್, ಢಾಬಾ ಹಾಗೂ ಮದುವೆ ಕಾರ್ಯಕ್ರಮಗಳಿಗೆ ಕೇಟರಿಂಗ್​​ನವರು ಸೌದೆ ಒಲೆಯತ್ತ ಮುಖ ಮಾಡಿದ್ದಾರೆ. ಅದಕ್ಕಾಗಿ ನಗರದಲ್ಲಿ ಕಟ್ಟಿಗೆ ಅಡ್ಡೆಗಳಲ್ಲಿ ಸೌದೆ ಖರೀದಿ ಮಾಡುವುದಕ್ಕೆ ಮುಗಿಬಿದ್ದಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ಅಡುಗೆ ಗುತ್ತಿಗೆ ಹಿಡಿದಿರುವ ಕೇಟರಿಂಗ್​​ನವರಿಗೆ ಗ್ಯಾಸ್ ಟ್ರಬಲ್ ಎದುರಾಗಿದೆ. ಹೀಗಾಗಿ ಸೌದೆ ಒಲೆಯಲ್ಲೇ ಅಡುಗೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ.

ಒಟ್ಟಿನಲ್ಲಿ ಸದ್ಯ ಕಲಬುರಗಿಯಲ್ಲಿಯೂ ಸಿಲಿಂಡರ್ ಹಾಹಾಕಾರ ಶುರುವಾಗಿದೆ. ಮುಂದೆ ಅದ್ಯಾವ ಮಟ್ಟಕ್ಕೆ ಹೋಗುತ್ತೋ ಕಾದುನೋಡಬೇಕು. ಏಕೆಂದರೆ ಸಿಲಿಂಡರ್​​ ಸಿಗದಿದ್ದರೆ ಮತ್ತಷ್ಟು ಸಂಕಷ್ಟ ಎದುರಾಗೋದು ಕಟ್ಟಿಟ್ಟ ಬುತ್ತಿ.

 

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!