3 ಹಂತದಲ್ಲಿ ಒಳ ಮೀಸಲಾತಿ ಸಮೀಕ್ಷೆ ಸೋಮವಾರದಿಂದಲೇ ಶುರು! ಸಿದ್ದರಾಮಯ್ಯ ಮಾಹಿತಿ.

ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ವಿಧಾನಸೌಧದಲ್ಲಿ ಸೋಮವಾರ ಒಳಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ ಸಮೀಕ್ಷೆ ಕುರಿತಾಗಿ ಮಾತನಾಡಿದ ಅವರು, ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತ ಮೇ 5 ರಿಂದ ಶುರುವಾಗಲಿದೆ. ಇದಕ್ಕಾಗಿ ವಿಶೇಷ ಶಿಬಿರಗಳಲ್ಲಿ ಈ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನು 3 ನೇ ಹಂತ ಆನ್ ಲೈನ್ ಮೂಲಕ ನಡೆಯಲಿದೆ. ಅಲ್ಲೂ ಜನರಿಗೆ ಮಾಹಿತಿಯನ್ನು ನೀಡಲು ಅವಕಾಶ ಇದೆ. ಈ ಹಿನ್ನೆಲೆಯಲ್ಲಿ ಎಸ್ಸಿ ಸಮುದಾಯ ಗಣತಿದಾರರು ಮನೆ ಮನೆಗೆ ಬಂದಾಗ ಮಾಹಿತಿಯನ್ನು ನೀಡಬೇಕು. ಗಣತಿದಾರರು ಮನೆಗೆ ಭೇಟಿ ಕೊಟ್ಟಾಗ ಜನರು ಇಲ್ಲದೇ ಹೋದರೆ ಶಿಬಿರದಲ್ಲಾದರೂ ಅಥವಾ ಆನ್ ಲೈನ್ ಮೂಲಕವೂ ಮಾಹಿತಿಯನ್ನು ನೀಡಬಹುದು ಎಂದು ಮನವಿ ಮಾಡಿದರು.

100 ಕೋಟಿ ಖರ್ಚು
ಎಸ್ಸಿ ಒಳಮೀಸಲಾತಿ ಸಮೀಕ್ಷೆಗೆ ಸುಮಾರು 100 ಕೋಟಿ ಖರ್ಚು ಆಗಬಹುದು. ನಾಗಮೋಹನ್ ದಾಸ್ ಅವರು ಏನು ಶಿಫಾರಸು ಮಾಡುತ್ತಾರೆ ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
60 ದಿನ ಡೆಡ್ ಲೈನ್
ಸಮೀಕ್ಷೆ ನಡೆಸಲು 60 ದಿನಗಳ ಕಾಲ ಡೆಟ್ ಲೈನ್ ಕೊಡಲಾಗಿದೆ. ಜಾತಿಗಣತಿಯೂ ಒಳಮೀಸಲಾತಿ ಗಣತಿಗೂ ಯಾವುದೇ ಸಂಬಂಧ ಇಲ್ಲ. ಇದು ಕೇವಲ ಎಸ್ಸಿ ಸಮುದಾಯಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹೆಲ್ಪ್ ಲೈನ್ ಆರಂಭ
9481359000 ಹೆಲ್ತ್ ಲೈನ್ ಆರಂಭ ಮಾಡಲಾಗಿದೆ. ಯಾವುದೇ ಗೊಂದಲ ಇದ್ದರೂ ಈ ಫೋನ್ ನಂಬರ್ ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಮೀಕ್ಷೆ ಹೇಗೆ ?
ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025 ವರೆಗೆ ನಡೆಯಲಿದೆ.

ಎರಡನೇ ಹಂತದಲ್ಲಿ 19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು. ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.ಮೊಬೈಲ್ ಆಪ್
ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!