ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….!

ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….!

: ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ನಾನಾ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರಕಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅಂತಾರಾಷ್ಟ್ರೀಯ ವಸತಿ ಶಾಲೆ ತೆರೆಯಲು ನಿರ್ಧರಿಸಿದೆ.

ಸಿಎಂ ತವರು ಜಿಲ್ಲೆ ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಅಂತಾ ರಾಷ್ಟ್ರೀಯ ವಸತಿ ಶಾಲೆಯನ್ನು ಆರಂಭಿಸಲು ಕಾರ್ಮಿಕ ಇಲಾಖೆ ಯೋಜನೆ ರೂಪಿಸಿದ್ದು, ಇದು ಯಶಸ್ವಿಯಾಗುತ್ತಿದ್ದಂತೆ ಉಳಿದ ಎಲ್ಲ ಜಿಲ್ಲೆಗಳಲ್ಲಿಯೂ ವಸತಿ ಶಾಲೆಯನ್ನು ತೆರೆಯಲು ಕ್ರಮ ವಹಿಸಲಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ವಸತಿ ಶಾಲೆ ಯೋಜನೆಯ ರೂವಾರಿಯಾಗಿದ್ದು, ತಾವು ಉಸ್ತುವಾರಿ ಸಚಿವರಾಗಿ ಪ್ರತಿನಿಧಿಸುವ ಧಾರವಾಡ ಜಿಲ್ಲೆಯಲ್ಲಿ ಪ್ರಾಯೋಗಿ ಕವಾಗಿ ಈ ಶಾಲೆಯನ್ನು ತೆರೆಯಲು ನಿರ್ಧರಿಸಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಮನವಿ ಮೇರೆಗೆ…
[2:14 pm, 1/9/2025] Harshi: ಮೈಸೂರು ತಾಲ್ಲೂಕಿನ ವರುಣ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ವಸತಿ ಶಾಲೆ ಆರಂಭವಾಗುತ್ತಿದೆ.
ಈ ಶಾಲೆಯು ಕಟ್ಟಡ ಕಾರ್ಮಿಕರ ಮಕ್ಕಳಿಗೇ ಮೀಸಲಾಗಿದ್ದು, ರಾಜ್ಯ ಸರ್ಕಾರದಿಂದಲೇ ವಿಶೇಷ ಯೋಜನೆ ರೂಪಿಸಲಾಗಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಪ್ರಸ್ತಾಪದಂತೆ, ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ ಧಾರವಾಡ ಜಿಲ್ಲೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣದಲ್ಲಿ ಶಾಲೆ ಆರಂಭವಾಗಲಿದೆ. ನಂತರ ಹಂತ ಹಂತವಾಗಿ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು.

ಮೈಸೂರು ಜಿಲ್ಲೆಯಲ್ಲಿ ಶಾಲೆ ನಿರ್ಮಾಣಕ್ಕಾಗಿ ಕಾರ್ಮಿಕ ಇಲಾಖೆ ಈಗಾಗಲೇ 20 ಎಕರೆ ಜಾಗ ಒದಗಿಸಲು ಜಿಲ್ಲಾಡಳಿತಕ್ಕೆ ಪತ್ರ ಬರೆದಿದೆ. ಜಾಗ ಅಂತಿಮವಾದ ತಕ್ಷಣ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.
ಏಕೆ ಈ ಶಾಲೆ?
ಕಟ್ಟಡ ಕಾರ್ಮಿಕರು ಉದ್ಯೋಗಕ್ಕಾಗಿ ಆಗಾಗ ಸ್ಥಳಾಂತರಗೊಳ್ಳುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡೆತಡೆ ಉಂಟಾಗುತ್ತಿದೆ. ಹಲವಾರು ಮಕ್ಕಳು ಶಾಲೆ ಬಿಡಿ ಕಟ್ಟಡ ಕಾರ್ಮಿಕರ ಕೆಲಸದಲ್ಲಿ ತೊಡಗುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವಾಗಿ 1ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಹಾಗೂ ವಸತಿ ಸೌಲಭ್ಯವಿರುವ ಅಂತಾರಾಷ್ಟ್ರೀಯ ವಸತಿ ಶಾಲೆ ಪ್ರಾರಂಭವಾಗುತ್ತಿದೆ.

ಇಲ್ಲಿ ಸಾವಿರಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುವ ಅವಕಾಶ ದೊರಕಲಿದೆ
.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!