ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ!

ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ ನಾಳೆ (ಮೇ 15) ಸುಪ್ರೀಂಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.

ಕಾರಾಗೃಹದ ಅವ್ಯವಸ್ಥೆ ಮತ್ತು ಸಹ ಕೈದಿಗಳಿಂದ ಬೆದರಿಕೆ, ಕಿರುಕುಳ ಸೇರಿದಂತೆ ಇನ್ನೂ ಕೆಲವು ಸಮಸ್ಯೆಗಳನ್ನು ದರ್ಶನ್, ಸುಪ್ರೀಂಕೋರ್ಟ್ ಮುಂದೆ ಹೇಳಿಕೊಂಡಿದ್ದರು. ಈ ಸಂಬಂಧ ಕಾರಾಗೃಹ ಇಲಾಖೆಯಿಂದ ವರದಿಯನ್ನು ಸುಪ್ರೀಂಕೋರ್ಟ್ ಕೇಳಿತ್ತು. ಇದೀಗ ಎಸ್​​ಪಿಪಿ ಅವರು ಈ ಕುರಿತು ನ್ಯಾಯಾಲಯಕ್ಕೆ ಕೆಲವು ವಿಡಿಯೋ ಸಾಕ್ಷ್ಯಗಳ ಸಹಿತ ವಾದ ಮಂಡಿಸಿದ್ದು, ದರ್ಶನ್ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ದರ್ಶನ್​​ಗೆ ಇತರೆ ಕೈದಿಗಳೊಟ್ಟಿಗೆ ಸಂಪರ್ಕ ಇಲ್ಲವೆಂದು, ಅವರನ್ನು ಪ್ರತ್ಯೇಕ ಸೆಲ್​​ನಲ್ಲಿ ಇರಿಸಲಾಗಿದೆ ಎಂದಿದ್ದಾರೆ. ನ್ಯಾಯಾಲಯಕ್ಕೆ ಸಿಸಿಟಿವಿ ಮತ್ತು ಬಾಡಿಕ್ಯಾಮ್​​ಗಳ ದೃಶ್ಯಗಳನ್ನು ಸಹ ಸಲ್ಲಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಇವುಗಳ ಜೊತೆಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮಾಡುತ್ತಿಲ್ಲ, 270 ಸಾಕ್ಷ್ಯಗಳಲ್ಲಿ 10 ಸಾಕ್ಷ್ಯಗಳ ವಿಚಾರಣೆಯನ್ನೂ ಮಾಡಲಾಗಿಲ್ಲ ವಿಚಾರಣೆ ನಡೆಯುವವರೆಗೆ ತಮಗೆ ಜಾಮೀನು ನೀಡಬೇಕು ಎಂದು ಸಹ ದರ್ಶನ್ ಮನವಿ ಮಾಡಿದ್ದರು. ಈ ಬಗ್ಗೆಯೂ ಸಹ ಸುಪ್ರೀಂಕೋರ್ಟ್ ವರದಿ ಕೇಳಿತ್ತು. ಅದನ್ನೂ ಸಹ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಸುಪ್ರೀಂಕೋರ್ಟ್​​ಗೆ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ, ದರ್ಶನ್ ಸಲ್ಲಿಕೆ ಮಾಡಿದ್ದ ಇತರೆ ಅರ್ಜಿಗಳ ಕಾರಣಕ್ಕೆ ಮುಖ್ಯ ಆರೋಪದ ವಿಚಾರಣೆ ತಡವಾಗಿದೆ ಎಂದು ಎಸ್​​ಪಿಪಿ ವಾದ ಮಂಡಿಸಿದ್ದಾರೆ ಎನ್ನಲಾಗಿದೆ.

ರೇಣುಕಾ ಸ್ವಾಮಿ ಕೊಲೆಯಾಗಿ ಎರಡು ವರ್ಷಗಳಾಗುತ್ತಾ ಬಂದಿದೆ. (ಜೂನ್ 08, 2024) ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಹಲವು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದರು. 2024ರ ಅಕ್ಟೋಬರ್ ತಿಂಗಳಲ್ಲಿ ವೈದ್ಯಕೀಯ ಚಿಕಿತ್ಸೆ ಕಾರಣ ನೀಡಿ ದರ್ಶನ್ ಜಾಮೀನು ಪಡೆದಿದ್ದರು. ಆ ಬಳಿಕ ಪವಿತ್ರಾ ಸೇರಿದಂತೆ ಇತರೆ ಕೆಲವು ಆರೋಪಿಗಳಿಗೂ ಜಾಮೀನು ನೀಡಲಾಯ್ತು. ಬಳಿಕ ದರ್ಶನ್ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡು, ಚಿತ್ರೀಕರಣವನ್ನೂ ಮುಗಿಸಿದರು. ಆದರೆ ಬೆಂಗಳೂರು ಪೊಲೀಸರು ದರ್ಶನ್ ಜಾಮೀನು ರದ್ದು ಮಾಡುವಂತೆ ಸುಪ್ರೀಂಕೋರ್ಟ್​​ಗೆ ಮನವಿ ಸಲ್ಲಿಸಿದ್ದರು, ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳ ಜಾಮೀನನ್ನು 2025ರ ಆಗಸ್ಟ್ ತಿಂಗಳಲ್ಲಿ ರದ್ದು ಮಾಡಿತು. ಆಗಿನಿಂದಲೂ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Related Posts

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಕರ್ನಾಟಕದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಆರಂಭಿಸಿದ ಅಹಿಂದ ಹಾಗೂ ಸಾಮಾಜಿಕ ನ್ಯಾಯದ ಪರಂಪರೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದುವರಿಸಿದಂತೆ ಕಾಣುತ್ತಿದೆ. ಇತ್ತೀಚಿನ ಖಾತೆ ಹಂಚಿಕೆಯಲ್ಲಿ ಮಾಯಕೊಂಡ ಶಾಸಕ ಹಾಗೂ ದಲಿತ ಸಮುದಾಯದ ಮುಖಂಡ ಕೆ.ಎಸ್. ಬಸವಂತಪ್ಪ ಅವರಿಗೆ ಮುಜರಾಯಿ, ಮೀನುಗಾರಿಕೆ,…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !