ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್​ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್‌ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ ವ್ಯವಸ್ಥೆಯಲ್ಲಿನ ಲೋಪಗಳನ್ನು ಇದು ಎತ್ತಿ ತೋರಿಸುತ್ತಿದೆ.

ಮೈಸೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿದ್ದು, ಉಗ್ರ ಮತ್ತು ಅತ್ಯಾಚಾರಿಗಳೂ ಮೊಬೈಲ್​ ಬಳಸುತ್ತಿದ್ದ ಕ್ಲಿಪ್​ಗಳು ಹೊರ ಬಂದಿದ್ದವು. ಆ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಸರ್ಕಾರ ಘಟನೆ ಸಂಬಂಧ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಿ, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿಯೂ ಕೈದಿಗಳಿಗೆ ಸಕಲ ಸೌಕರ್ಯ ಸಿಗುತ್ತಿರುವ ಬಗ್ಗೆ ವರದಿಯಾಗಿದೆ.

ಮೈಸೂರು ಕೇಂದ್ರ ಕಾರಾಗ್ರಹದಲ್ಲಿ ಕೆಲ ಕೈದಿಗಳಿಗೆ ಬೇಕಾದ ಸೌಲಭ್ಯ ಒದಗಿಸಲಾಗುತ್ತಿದ್ದು, ಮದ್ಯ, ಮಾಂಸಾಹಾರ, ಸಿಗರೇಟುಗಳು ಮತ್ತು ಬೀಡಿ, ಮೊಬೈಲ್ ಫೋನ್​ಗಳು ನಿರ್ದಿಷ್ಟ ಬೆಲೆಗೆ ಲಭ್ಯವಾಗುತ್ತಿವೆ. ಆ ಮೂಲಕ ಕೈದಿಗಳ ಮನಃಪರಿವರ್ತನಾ ಕೇಂದ್ರಗಳಾಗಬೇಕಿದ್ದ ಜೈಲು, ಮೋಜಿನ ಸ್ಥಳವಾಗಿ ಮಾರ್ಪಟ್ಟಿದೆ. ಕಾರಾಗೃಹದ ಒಳಭಾಗದಲ್ಲಿ ಪ್ರತಿ ವಸ್ತುವಿಗೂ ನಿಗದಿತ ಬೆಲೆ ಇದ್ದು, ಮಾರುಕಟ್ಟೆಯಲ್ಲಿ ದರ ಬದಲಾದರೂ ಇಲ್ಲಿ ಯಾವುದೇ ಏರಿಳಿತ ಆಗಲ್ಲ. ಒಂದು ವಸ್ತುವಿನ ಕನಿಷ್ಟ ಬೆಲೆಯೇ 150 ರೂ. ಇದೆ. ಇಷ್ಟು ಹಣ ಕೊಟ್ಟು ಖರೀದಿಸುವ ಸಾಮರ್ಥ್ಯ ಇರುವವರಿಗಾಗಿ ಪ್ರತಿ ವಾರ ಮದ್ಯ ಮತ್ತು ಮಾಂಸವನ್ನು ಆರ್ಡರ್​ ಮಾಡಲಾಗುತ್ತೆ ಎಂಬ ಬಗ್ಗೆ ಜೈಲ್ ವಿಸಿಟಿಂಗ್ ಬೋರ್ಡಿನ ಸದಸ್ಯ ಪವನ ಸಿದ್ದರಾಮು ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಕೈದಿಗಳಿಗೆ ಐಷಾರಾಮಿ ಜೀವನಕ್ಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಕ್ಯಾಂಟೀನ್​ ಆಪರೇಟರ್​​ಗಳು ಮತ್ತು ಕೆಲ ಕರ್ನಾಟಕ ಸ್ಟೇಟ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಸಿಬ್ಬಂದಿ ಪಾತ್ರ ವಹಿಸಿದ್ದಾರೆ. ಇವು ಜೈಲು ಅಧೀಕ್ಷಕರ ಮೂಗಿನ ಕೆಳಗೆಯೇ ನಡೆಯುತ್ತಿರುವ ಘಟನೆಗಳಾಗಿವೆ. ಮೈಸೂರು ಪೊಲೀಸರು ಸರ್ಪ್ರೈಸ್​ ವಿಸಿಟ್​ಗಳನ್ನು ನಡೆಸಿದರೂ ಅಲ್ಲಿ ಏನು ಸಿಗದಿರುವುದು ವಿಪರ್ಯಾಸ. ಸರಿಯಾಗಿ ದಾಳಿ ನಡೆಸಿದರೆ ಪ್ರತಿಬಾರಿಯೂ ನೂರಾರು ಸಿಮ್ ಕಾರ್ಡ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಬಹುದು. ಮೈಸೂರು ಕೇಂದ್ರ ಕಾರಾಗೃಹದ ಪ್ರಸ್ತುತ ಮುಖ್ಯ ಸೂಪರ್‌ಟೆಂಡೆಂಟ್ ಹಿಂದೆ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲಸ ಮಾಡಿದ್ದರು. ಈಗ ಅಲ್ಲಿಂದ ದೇಶಾದ್ಯಂತ ಸುದ್ದಿಯಾಗುವ ರೀತಿಯ ವಿಡಿಯೋಗಳು ಹೊರ ಬಂದಿವೆ. ಆ ಮೂಲಕ ನಾವು ಕಾರಾಗೃಹಗಳಲ್ಲಿ ಪ್ಯಾರಲೆಲ್ ಮಾಫಿಯಾ ನೆಟ್‌ವರ್ಕ್ ನಿರ್ಮಿಸುತ್ತಿದ್ದೇವೆ ಎಂದು ಪವನ ಸಿದ್ದರಾಮು ತಿಳಿಸಿದ್ದಾರೆ ಎಂದು ವರದಿಯಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!