ವಿಶ್ವ ವಿಖ್ಯಾತಿ ಮೈಸೂರು ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಾಯ್ತಾ ,,,!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ. ಉದ್ಘಾಟಕರಾಗಿ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಹೆಸರು ಘೋಷಣೆಯಾಗಿದೆ. ಈ ಸಂಗತಿಗಳನ್ನು ಹೊರತು ಪಡಿಸಿ ದಸರಾ-೨೦೨೫ ರ ಯಾವುದೇ ಕಾರ್ಯಕ್ರಮಗಳ ವಿವರ ಲಭ್ಯವಿಲ್ಲ.

ಮೈಸೂರು ದಸರಾ ಮಹೋತ್ಸವದ ಇಂಚಿಂಚು ಮಾಹಿತಿಯನ್ನು ಒದಗಿಸಬೇಕಾಗಿದ್ದ ದಸರಾ ವೆಬ್‌ ಸೈಟ್‌ ಈತನಕ ಸಿದ್ಧಗೊಂಡಿಲ್ಲ. ಯಾರಾದರು ಕುತೂಹಲದಿಂದ ಈ ಸೈಟ್‌ ಗೆ ಭೇಟಿ ನೀಡಿದರೆ ನಿರಾಸೆ ಖಂಡಿತ.

ಕಾರಣ ಈ ವೆಬ್‌ ಸೈಟ್‌ ನಲ್ಲಿ ಯಾವುದೇ ಮಾಹಿತಿ ಇಲ್ಲ. ಅಸಲಿಗೆ ಈ ಸೈಟ್‌ ಒಪನ್‌ ಆಗೋದೇ ಇಲ್ಲ. ಅದು ಯೂಸರ್‌ ನೇಮ್‌ ,ಪಾಸವರ್ಡ್‌ ಕೇಳುತ್ತದೆ. ದಸರಾ ಮಹೋತ್ಸವ ವೀಕ್ಷಿಸಲು ಪ್ಲಾನ್‌ ಮಾಡುವ ಉದ್ದೇಶ ಹೊಂದಿರುವ ವಿದೇಶಿಗರಿಗೆ ಇದರಿಂದ ತೀವ್ರ ನಿರಾಸೆಯಾಗಿದೆ. ಟಿಕೆಟ್‌ ಅದರಲ್ಲೂ “ ಗೋಲ್ಡ್‌ ಕಾರ್ಡ್‌ “ ಪಡೆದು ಕಾರ್ಯಕ್ರಮ ವೀಕ್ಷಿಸುವ ಬಯಕೆ ಹೊಂದಿರುವವರು ವೆಬ್‌ ಸೈಟ್‌ ಸಿದ್ಧವಾಗದ್ದನ್ನು ಕಂಡು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಸಾಲಿನ ದಸರಾ ಮಹೋತ್ಸವದ ಕಾರ್ಯಕ್ರಮಗಳೇನು, ಯಾವಯಾವ ಕಲಾವಿದರು ಬರುತ್ತಾರೆ. ಕಾರ್ಯಕ್ರಮಗಳು ಎಲ್ಲಿ ನಡೆಯುತ್ತವೆ. ಅದರ ಸಮಯ ಏನು..? ಈ ಯಾವ ಮಾಹಿತಿಯು ಈ ತನಕ ಲಭ್ಯವಿಲ್ಲ.

ಯುವ ದಸರಾ ಎಲ್ಲಿ..?:

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಕಳೆದ ವರ್ಷ ಮಹಾರಾಜ ಕಾಲೇಜು ಮೈದಾನದ ಬದಲಿಗೆ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ನಡೆಸಲಾಗಿತ್ತು. ಇಳಯರಾಜ, ರೆಹಮಾನ್ ರಂಥ ಚಲನಚಿತ್ರರಂಗದ ಘಟಾನುಘಟಿ ಕಲಾವಿದರನ್ನು ಆಹ್ವಾನಿಸಿದ್ದರಿಂದ ನಗರ ಪ್ರದೇಶದಲ್ಲಿ ಜನದಟ್ಟನೆ ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಈ ವರ್ಷ ಎಲ್ಲಿ ಯುವ ದಸರಾ ನಡೆಸುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ. ಕಲಾವಿದರ ಡೇಟ್ಸ್‌ ಪೈನಲ್‌ ಆದ ಬಳಿಕ ಕಾರ್ಯಕ್ರಮ ಸ್ಥಳ ನಿಗಧಿಪಡಿಸುವ ಉದ್ದೇಶ ಹೊಂದಲಾಗಿದೆ.

ದಸರಾ ಮಹೋತ್ಸವದ ಅಧಿಕೃತ ವೆಬ್‌ಸೈಟ್ ಸಿದ್ಧವಾಗದಿರುವುದರಿಂದ ಪ್ರವಾಸಿಗರಿಗೆ ಮಾಹಿತಿ ಪಡೆಯಲು ತೊಂದರೆಯಾಗಿದೆ. ಇದು ಸಂಘಟನೆ ಕೊರತೆ ಸೂಚಿಸುತ್ತದೆ.

ಮೈಸೂರು ದಸರಾದ ವಿಶ್ವವಿಖ್ಯಾತ ಸ್ಥಾನಕ್ಕೆ ಇದರ ಐತಿಹಾಸಿಕ, ಸಾಂಸ್ಕೃತಿಕ, ಮತ್ತು ದೃಶ್ಯಾತ್ಮಕ ವೈಭವವೇ ಕಾರಣ. ಆದ್ದರಿಂದ 2025ರ ಆಚರಣೆಯ ಸಿದ್ಧತೆಯ ಕೊರತೆಯನ್ನು ಸರಿಪಡಿಸಲು ರಾಜ್ಯ ಸರಕಾರ ಶೀಘ್ರ ಕ್ರಮ ಕೈಗೊಂಡು , ಈ ವರ್ಷದ ದಸರಾವೂ ಯಶಸ್ವಿಯಾಗಿ ಜಗತ್ತಿನ ಗಮನ ಸೆಳೆಯುವಂತಾಗಲಿ.

 

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!