ವಿಶ್ವ ವಿಖ್ಯಾತಿ ಮೈಸೂರು ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಾಯ್ತಾ ,,,!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ. ಉದ್ಘಾಟಕರಾಗಿ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಹೆಸರು ಘೋಷಣೆಯಾಗಿದೆ. ಈ ಸಂಗತಿಗಳನ್ನು ಹೊರತು ಪಡಿಸಿ ದಸರಾ-೨೦೨೫ ರ ಯಾವುದೇ ಕಾರ್ಯಕ್ರಮಗಳ ವಿವರ ಲಭ್ಯವಿಲ್ಲ.

ಮೈಸೂರು ದಸರಾ ಮಹೋತ್ಸವದ ಇಂಚಿಂಚು ಮಾಹಿತಿಯನ್ನು ಒದಗಿಸಬೇಕಾಗಿದ್ದ ದಸರಾ ವೆಬ್‌ ಸೈಟ್‌ ಈತನಕ ಸಿದ್ಧಗೊಂಡಿಲ್ಲ. ಯಾರಾದರು ಕುತೂಹಲದಿಂದ ಈ ಸೈಟ್‌ ಗೆ ಭೇಟಿ ನೀಡಿದರೆ ನಿರಾಸೆ ಖಂಡಿತ.

ಕಾರಣ ಈ ವೆಬ್‌ ಸೈಟ್‌ ನಲ್ಲಿ ಯಾವುದೇ ಮಾಹಿತಿ ಇಲ್ಲ. ಅಸಲಿಗೆ ಈ ಸೈಟ್‌ ಒಪನ್‌ ಆಗೋದೇ ಇಲ್ಲ. ಅದು ಯೂಸರ್‌ ನೇಮ್‌ ,ಪಾಸವರ್ಡ್‌ ಕೇಳುತ್ತದೆ. ದಸರಾ ಮಹೋತ್ಸವ ವೀಕ್ಷಿಸಲು ಪ್ಲಾನ್‌ ಮಾಡುವ ಉದ್ದೇಶ ಹೊಂದಿರುವ ವಿದೇಶಿಗರಿಗೆ ಇದರಿಂದ ತೀವ್ರ ನಿರಾಸೆಯಾಗಿದೆ. ಟಿಕೆಟ್‌ ಅದರಲ್ಲೂ “ ಗೋಲ್ಡ್‌ ಕಾರ್ಡ್‌ “ ಪಡೆದು ಕಾರ್ಯಕ್ರಮ ವೀಕ್ಷಿಸುವ ಬಯಕೆ ಹೊಂದಿರುವವರು ವೆಬ್‌ ಸೈಟ್‌ ಸಿದ್ಧವಾಗದ್ದನ್ನು ಕಂಡು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಸಾಲಿನ ದಸರಾ ಮಹೋತ್ಸವದ ಕಾರ್ಯಕ್ರಮಗಳೇನು, ಯಾವಯಾವ ಕಲಾವಿದರು ಬರುತ್ತಾರೆ. ಕಾರ್ಯಕ್ರಮಗಳು ಎಲ್ಲಿ ನಡೆಯುತ್ತವೆ. ಅದರ ಸಮಯ ಏನು..? ಈ ಯಾವ ಮಾಹಿತಿಯು ಈ ತನಕ ಲಭ್ಯವಿಲ್ಲ.

ಯುವ ದಸರಾ ಎಲ್ಲಿ..?:

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಕಳೆದ ವರ್ಷ ಮಹಾರಾಜ ಕಾಲೇಜು ಮೈದಾನದ ಬದಲಿಗೆ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ನಡೆಸಲಾಗಿತ್ತು. ಇಳಯರಾಜ, ರೆಹಮಾನ್ ರಂಥ ಚಲನಚಿತ್ರರಂಗದ ಘಟಾನುಘಟಿ ಕಲಾವಿದರನ್ನು ಆಹ್ವಾನಿಸಿದ್ದರಿಂದ ನಗರ ಪ್ರದೇಶದಲ್ಲಿ ಜನದಟ್ಟನೆ ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಈ ವರ್ಷ ಎಲ್ಲಿ ಯುವ ದಸರಾ ನಡೆಸುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ. ಕಲಾವಿದರ ಡೇಟ್ಸ್‌ ಪೈನಲ್‌ ಆದ ಬಳಿಕ ಕಾರ್ಯಕ್ರಮ ಸ್ಥಳ ನಿಗಧಿಪಡಿಸುವ ಉದ್ದೇಶ ಹೊಂದಲಾಗಿದೆ.

ದಸರಾ ಮಹೋತ್ಸವದ ಅಧಿಕೃತ ವೆಬ್‌ಸೈಟ್ ಸಿದ್ಧವಾಗದಿರುವುದರಿಂದ ಪ್ರವಾಸಿಗರಿಗೆ ಮಾಹಿತಿ ಪಡೆಯಲು ತೊಂದರೆಯಾಗಿದೆ. ಇದು ಸಂಘಟನೆ ಕೊರತೆ ಸೂಚಿಸುತ್ತದೆ.

ಮೈಸೂರು ದಸರಾದ ವಿಶ್ವವಿಖ್ಯಾತ ಸ್ಥಾನಕ್ಕೆ ಇದರ ಐತಿಹಾಸಿಕ, ಸಾಂಸ್ಕೃತಿಕ, ಮತ್ತು ದೃಶ್ಯಾತ್ಮಕ ವೈಭವವೇ ಕಾರಣ. ಆದ್ದರಿಂದ 2025ರ ಆಚರಣೆಯ ಸಿದ್ಧತೆಯ ಕೊರತೆಯನ್ನು ಸರಿಪಡಿಸಲು ರಾಜ್ಯ ಸರಕಾರ ಶೀಘ್ರ ಕ್ರಮ ಕೈಗೊಂಡು , ಈ ವರ್ಷದ ದಸರಾವೂ ಯಶಸ್ವಿಯಾಗಿ ಜಗತ್ತಿನ ಗಮನ ಸೆಳೆಯುವಂತಾಗಲಿ.

 

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!