ವಿಶ್ವ ವಿಖ್ಯಾತಿ ಮೈಸೂರು ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಾಯ್ತಾ ,,,!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ. ಉದ್ಘಾಟಕರಾಗಿ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಹೆಸರು ಘೋಷಣೆಯಾಗಿದೆ. ಈ ಸಂಗತಿಗಳನ್ನು ಹೊರತು ಪಡಿಸಿ ದಸರಾ-೨೦೨೫ ರ ಯಾವುದೇ ಕಾರ್ಯಕ್ರಮಗಳ ವಿವರ ಲಭ್ಯವಿಲ್ಲ.

ಮೈಸೂರು ದಸರಾ ಮಹೋತ್ಸವದ ಇಂಚಿಂಚು ಮಾಹಿತಿಯನ್ನು ಒದಗಿಸಬೇಕಾಗಿದ್ದ ದಸರಾ ವೆಬ್‌ ಸೈಟ್‌ ಈತನಕ ಸಿದ್ಧಗೊಂಡಿಲ್ಲ. ಯಾರಾದರು ಕುತೂಹಲದಿಂದ ಈ ಸೈಟ್‌ ಗೆ ಭೇಟಿ ನೀಡಿದರೆ ನಿರಾಸೆ ಖಂಡಿತ.

ಕಾರಣ ಈ ವೆಬ್‌ ಸೈಟ್‌ ನಲ್ಲಿ ಯಾವುದೇ ಮಾಹಿತಿ ಇಲ್ಲ. ಅಸಲಿಗೆ ಈ ಸೈಟ್‌ ಒಪನ್‌ ಆಗೋದೇ ಇಲ್ಲ. ಅದು ಯೂಸರ್‌ ನೇಮ್‌ ,ಪಾಸವರ್ಡ್‌ ಕೇಳುತ್ತದೆ. ದಸರಾ ಮಹೋತ್ಸವ ವೀಕ್ಷಿಸಲು ಪ್ಲಾನ್‌ ಮಾಡುವ ಉದ್ದೇಶ ಹೊಂದಿರುವ ವಿದೇಶಿಗರಿಗೆ ಇದರಿಂದ ತೀವ್ರ ನಿರಾಸೆಯಾಗಿದೆ. ಟಿಕೆಟ್‌ ಅದರಲ್ಲೂ “ ಗೋಲ್ಡ್‌ ಕಾರ್ಡ್‌ “ ಪಡೆದು ಕಾರ್ಯಕ್ರಮ ವೀಕ್ಷಿಸುವ ಬಯಕೆ ಹೊಂದಿರುವವರು ವೆಬ್‌ ಸೈಟ್‌ ಸಿದ್ಧವಾಗದ್ದನ್ನು ಕಂಡು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಸಾಲಿನ ದಸರಾ ಮಹೋತ್ಸವದ ಕಾರ್ಯಕ್ರಮಗಳೇನು, ಯಾವಯಾವ ಕಲಾವಿದರು ಬರುತ್ತಾರೆ. ಕಾರ್ಯಕ್ರಮಗಳು ಎಲ್ಲಿ ನಡೆಯುತ್ತವೆ. ಅದರ ಸಮಯ ಏನು..? ಈ ಯಾವ ಮಾಹಿತಿಯು ಈ ತನಕ ಲಭ್ಯವಿಲ್ಲ.

ಯುವ ದಸರಾ ಎಲ್ಲಿ..?:

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಕಳೆದ ವರ್ಷ ಮಹಾರಾಜ ಕಾಲೇಜು ಮೈದಾನದ ಬದಲಿಗೆ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ನಡೆಸಲಾಗಿತ್ತು. ಇಳಯರಾಜ, ರೆಹಮಾನ್ ರಂಥ ಚಲನಚಿತ್ರರಂಗದ ಘಟಾನುಘಟಿ ಕಲಾವಿದರನ್ನು ಆಹ್ವಾನಿಸಿದ್ದರಿಂದ ನಗರ ಪ್ರದೇಶದಲ್ಲಿ ಜನದಟ್ಟನೆ ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಈ ವರ್ಷ ಎಲ್ಲಿ ಯುವ ದಸರಾ ನಡೆಸುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ. ಕಲಾವಿದರ ಡೇಟ್ಸ್‌ ಪೈನಲ್‌ ಆದ ಬಳಿಕ ಕಾರ್ಯಕ್ರಮ ಸ್ಥಳ ನಿಗಧಿಪಡಿಸುವ ಉದ್ದೇಶ ಹೊಂದಲಾಗಿದೆ.

ದಸರಾ ಮಹೋತ್ಸವದ ಅಧಿಕೃತ ವೆಬ್‌ಸೈಟ್ ಸಿದ್ಧವಾಗದಿರುವುದರಿಂದ ಪ್ರವಾಸಿಗರಿಗೆ ಮಾಹಿತಿ ಪಡೆಯಲು ತೊಂದರೆಯಾಗಿದೆ. ಇದು ಸಂಘಟನೆ ಕೊರತೆ ಸೂಚಿಸುತ್ತದೆ.

ಮೈಸೂರು ದಸರಾದ ವಿಶ್ವವಿಖ್ಯಾತ ಸ್ಥಾನಕ್ಕೆ ಇದರ ಐತಿಹಾಸಿಕ, ಸಾಂಸ್ಕೃತಿಕ, ಮತ್ತು ದೃಶ್ಯಾತ್ಮಕ ವೈಭವವೇ ಕಾರಣ. ಆದ್ದರಿಂದ 2025ರ ಆಚರಣೆಯ ಸಿದ್ಧತೆಯ ಕೊರತೆಯನ್ನು ಸರಿಪಡಿಸಲು ರಾಜ್ಯ ಸರಕಾರ ಶೀಘ್ರ ಕ್ರಮ ಕೈಗೊಂಡು , ಈ ವರ್ಷದ ದಸರಾವೂ ಯಶಸ್ವಿಯಾಗಿ ಜಗತ್ತಿನ ಗಮನ ಸೆಳೆಯುವಂತಾಗಲಿ.

 

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!