ವಿಶ್ವ ವಿಖ್ಯಾತಿ ಮೈಸೂರು ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಾಯ್ತಾ ,,,!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ. ಉದ್ಘಾಟಕರಾಗಿ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಹೆಸರು ಘೋಷಣೆಯಾಗಿದೆ. ಈ ಸಂಗತಿಗಳನ್ನು ಹೊರತು ಪಡಿಸಿ ದಸರಾ-೨೦೨೫ ರ ಯಾವುದೇ ಕಾರ್ಯಕ್ರಮಗಳ ವಿವರ ಲಭ್ಯವಿಲ್ಲ.

ಮೈಸೂರು ದಸರಾ ಮಹೋತ್ಸವದ ಇಂಚಿಂಚು ಮಾಹಿತಿಯನ್ನು ಒದಗಿಸಬೇಕಾಗಿದ್ದ ದಸರಾ ವೆಬ್‌ ಸೈಟ್‌ ಈತನಕ ಸಿದ್ಧಗೊಂಡಿಲ್ಲ. ಯಾರಾದರು ಕುತೂಹಲದಿಂದ ಈ ಸೈಟ್‌ ಗೆ ಭೇಟಿ ನೀಡಿದರೆ ನಿರಾಸೆ ಖಂಡಿತ.

ಕಾರಣ ಈ ವೆಬ್‌ ಸೈಟ್‌ ನಲ್ಲಿ ಯಾವುದೇ ಮಾಹಿತಿ ಇಲ್ಲ. ಅಸಲಿಗೆ ಈ ಸೈಟ್‌ ಒಪನ್‌ ಆಗೋದೇ ಇಲ್ಲ. ಅದು ಯೂಸರ್‌ ನೇಮ್‌ ,ಪಾಸವರ್ಡ್‌ ಕೇಳುತ್ತದೆ. ದಸರಾ ಮಹೋತ್ಸವ ವೀಕ್ಷಿಸಲು ಪ್ಲಾನ್‌ ಮಾಡುವ ಉದ್ದೇಶ ಹೊಂದಿರುವ ವಿದೇಶಿಗರಿಗೆ ಇದರಿಂದ ತೀವ್ರ ನಿರಾಸೆಯಾಗಿದೆ. ಟಿಕೆಟ್‌ ಅದರಲ್ಲೂ “ ಗೋಲ್ಡ್‌ ಕಾರ್ಡ್‌ “ ಪಡೆದು ಕಾರ್ಯಕ್ರಮ ವೀಕ್ಷಿಸುವ ಬಯಕೆ ಹೊಂದಿರುವವರು ವೆಬ್‌ ಸೈಟ್‌ ಸಿದ್ಧವಾಗದ್ದನ್ನು ಕಂಡು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಸಾಲಿನ ದಸರಾ ಮಹೋತ್ಸವದ ಕಾರ್ಯಕ್ರಮಗಳೇನು, ಯಾವಯಾವ ಕಲಾವಿದರು ಬರುತ್ತಾರೆ. ಕಾರ್ಯಕ್ರಮಗಳು ಎಲ್ಲಿ ನಡೆಯುತ್ತವೆ. ಅದರ ಸಮಯ ಏನು..? ಈ ಯಾವ ಮಾಹಿತಿಯು ಈ ತನಕ ಲಭ್ಯವಿಲ್ಲ.

ಯುವ ದಸರಾ ಎಲ್ಲಿ..?:

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಕಳೆದ ವರ್ಷ ಮಹಾರಾಜ ಕಾಲೇಜು ಮೈದಾನದ ಬದಲಿಗೆ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ನಡೆಸಲಾಗಿತ್ತು. ಇಳಯರಾಜ, ರೆಹಮಾನ್ ರಂಥ ಚಲನಚಿತ್ರರಂಗದ ಘಟಾನುಘಟಿ ಕಲಾವಿದರನ್ನು ಆಹ್ವಾನಿಸಿದ್ದರಿಂದ ನಗರ ಪ್ರದೇಶದಲ್ಲಿ ಜನದಟ್ಟನೆ ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಈ ವರ್ಷ ಎಲ್ಲಿ ಯುವ ದಸರಾ ನಡೆಸುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ. ಕಲಾವಿದರ ಡೇಟ್ಸ್‌ ಪೈನಲ್‌ ಆದ ಬಳಿಕ ಕಾರ್ಯಕ್ರಮ ಸ್ಥಳ ನಿಗಧಿಪಡಿಸುವ ಉದ್ದೇಶ ಹೊಂದಲಾಗಿದೆ.

ದಸರಾ ಮಹೋತ್ಸವದ ಅಧಿಕೃತ ವೆಬ್‌ಸೈಟ್ ಸಿದ್ಧವಾಗದಿರುವುದರಿಂದ ಪ್ರವಾಸಿಗರಿಗೆ ಮಾಹಿತಿ ಪಡೆಯಲು ತೊಂದರೆಯಾಗಿದೆ. ಇದು ಸಂಘಟನೆ ಕೊರತೆ ಸೂಚಿಸುತ್ತದೆ.

ಮೈಸೂರು ದಸರಾದ ವಿಶ್ವವಿಖ್ಯಾತ ಸ್ಥಾನಕ್ಕೆ ಇದರ ಐತಿಹಾಸಿಕ, ಸಾಂಸ್ಕೃತಿಕ, ಮತ್ತು ದೃಶ್ಯಾತ್ಮಕ ವೈಭವವೇ ಕಾರಣ. ಆದ್ದರಿಂದ 2025ರ ಆಚರಣೆಯ ಸಿದ್ಧತೆಯ ಕೊರತೆಯನ್ನು ಸರಿಪಡಿಸಲು ರಾಜ್ಯ ಸರಕಾರ ಶೀಘ್ರ ಕ್ರಮ ಕೈಗೊಂಡು , ಈ ವರ್ಷದ ದಸರಾವೂ ಯಶಸ್ವಿಯಾಗಿ ಜಗತ್ತಿನ ಗಮನ ಸೆಳೆಯುವಂತಾಗಲಿ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!