ಜಚನಿ‌ ಶ್ರೀಗಳು ಚರ್ಮ ಶುದ್ಧಿಗಿಂತ ಅಂತರಂಗ ಶುದ್ಧಿಗೆ, ಸಾಮಾಜಿಕ ಶುದ್ಧಿಗೆ ಮಹತ್ವ ನೀಡಿದರು: ಕೆ.ವಿ.ಪಿ

ಬೆಂಗಳೂರು : ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ: ಕೆ.ವಿ.ಪ್ರಭಾಕರ್ ಶ್ರೀ ಜಚನಿ‌ ಅಧ್ಯಯನ‌ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ” ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ಮನುಷ್ಯರನ್ನು ಮುಟ್ಟಿಸಿಕೊಳ್ಳದ ಚರ್ಮಶುದ್ಧಿಯ ಅಧ್ಯಾತ್ಮದ ಗೊಡ್ಡುತನವನ್ನು ಧಿಕ್ಕರಿಸಿ 1948ರಲ್ಲೇ ದಲಿತ ಸಮುದಾಯಕ್ಕೆ ತಮ್ಮ ಮಠವನ್ನು ಮುಕ್ತಗೊಳಿಸಿದ ಜಚನಿ ಶ್ರೀಗಳು ಸಾಮಾಜಿಕ ಮತ್ತು ಅಂತರಂಗದ ಶುದ್ಧಿಯನ್ನೇ ತಮ್ಮ ಅಧ್ಯಾತ್ಮದ ಉದ್ದೇಶವನ್ನಾಗಿಸಿಕೊಂಡಿದ್ದರು ಎಂದು ವಿವರಿಸಿದರು.

ಆಡು ಮುಟ್ಟದ ಸೊಪ್ಪಿಲ್ಲ, ಜಚನಿ ಶ್ರೀಗಳು ಸಾಹಿತ್ಯ ಕೃಷಿ ಮಾಡದ ವಿಷಯಗಳೇ ಇಲ್ಲ ಎಂದು ಹೇಳಬಹುದು. ಧಾರ್ಮಿಕ, ಅಧ್ಯಾತ್ಮಿಕದಿಂದ ದೇಶದ ತುರ್ತು ಪರಿಸ್ಥಿತಿ, ಸರ್ವಾಧಿಕಾರದವರೆಗೂ ಬರೆದಿದ್ದಾರೆ.ತಮ್ಮ ಬದುಕನ್ನು ಸಾಹಿತ್ಯ ಕೃಷಿ ಮತ್ತು ಅಧ್ಯಾತ್ಮದ ಪ್ರಸಾರಕ್ಕೆ ಮಾತ್ರ ಜಚನಿ ಶ್ರೀಗಳು ಸೀಮಿತಗೊಳಿಸಿಕೊಳ್ಳಲಿಲ್ಲ.ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಇಡೀ ರಾಜ್ಯ ಸುತ್ತಿದ ಸಾಮಾಜಿಕ ಮತ್ತು ರಾಜಕೀಯ ಹೋರಾಟಗಾರರೂ ಆಗಿದ್ದಾರೆ ಎನ್ನುವುದು ಹೊರ ಜಗತ್ತಿಗೆ ಹೆಚ್ಚಾಗಿ ಗೊತ್ತಿಲ್ಲ ಎಂದರು.

ಭೌತವಿಜ್ಞಾನದಿಂದ ಸಮುದ್ರ ವಿಜ್ಞಾನದವರೆಗೂ, ರೈತರ ಸಮಸ್ಯೆಗಳಿಂದ ಕುಡುಕರ ಸಮಸ್ಯೆಗಳವರೆಗೂ ಸಾಹಿತ್ಯ ಕೃಷಿ ಮಾಡಿದ್ದಾರೆ. ಹತ್ತಾರು ಮಂದಿ ಹಲವಾರು ಜೀವಮಾನದಲ್ಲಿ ಮಾಡಬಹುದಾದ ಸಾಧನೆಯನ್ನು ಜಚನಿ ಶ್ರೀಗಳು ಒಂದೇ ಜೀವಮಾನದಲ್ಲಿ ಮಾಡಿ ಮುಗಿಸಿದ್ದಾರೆ ಎಂದರು.ಇಂಥಾ ಜನಮುಖಿ ಅಧ್ಯಾತ್ಮಿಕ ಶಿಖರ ಸೂರ್ಯರ ಕೃತಿಯನ್ನು ಬಿಡುಗಡೆ ಮಾಡಲು ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಿಡುಮಾಮಿಡಿ ಶ್ರೀಗಳಿಗೆ ಧನ್ಯತೆಯನ್ನು ಅರ್ಪಿಸುತ್ತೇನೆ.

12ನೇ ಶತಮಾನದ ವಚನಕ್ರಾಂತಿಯ ರಾಯಭಾರಿಯಾಗಿ 20ನೇ ಶತಮಾನದಲ್ಲಿ ಜಚನಿ ಶ್ರೀಗಳು ಬೆಳಗಿದ್ದಾರೆ. 6000 ಕ್ಕೂ ಹೆಚ್ಚು ಆಧುನಿಕ ವಚನಗಳು, 400ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿರುವುದು ನನ್ನ ಕಲ್ಪನಾ ಶಕ್ತಿಗೂ ನಿಲುಕದ ಅಧ್ಯಾತ್ಮಿಕ‌ ಸಾಧನೆಯಾಗಿದೆ.ಇಂಥಾ ಮಾನವೀಯ ಸಾಧಕ ಗುರುಗಳ ಬಗ್ಗೆ ನಿಡುಮಾಮಿಡಿ ಶ್ರೀಗಳು ಸಂಪಾದಿಸಿರುವ ಈ ಪುಸ್ತಕ ಕೂಡ ಅತ್ಯಂತ ಮೌಲಿಕವಾದದ್ದು. ಈ ಪುಸ್ತಕ ಜಚನಿ ಶ್ರೀಗಳ ಒಟ್ಟಾರೆ ಸಾಧನೆಯನ್ನು ತಿಳಿಯಲು ಮತ್ತು ಅವರ ಮಾರ್ಗದಲ್ಲಿ ಹೋಗಲು ಬಯಸುವವರಿಗೆ ಹೆದ್ದಾರಿಯಾಗಿದೆ ಎಂದು ಹೇಳಲು ಬಯಸುತ್ತೇನೆ.

ಬೈಲಹೊಂಗಲದ ಅಂಬಡಗಟ್ಟಿ ಗ್ರಾಮದಲ್ಲಿ ಜನಿಸಿ, ನನ್ನ ಕೋಲಾರ ಜಿಲ್ಲೆಯ ಗೂಳೂರಿನ ನಿಡುಮಾಮಿಡಿ ಮಠದ ಪೀಠಾಧಿಪತಿಯಾಗಿ ಕೋಲಾರದ ಮಣ್ಣಿನಲ್ಲಿ ವನಚ ಕ್ರಾಂತಿಯ ಬೆಳಕಿನ ದೀವಿಗೆ ಹಚ್ಚಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.ಜಗದ್ಗುರು ಚನ್ನಬಸವರಾಜ ದೇಶೀಕೇಂದ್ರ ಶಿವಾಚಾರ್ಯ ಸ್ವಾಮಿಗಳು “ಜಚನಿ ಶ್ರೀ” ಹೆಸರಿನಲ್ಲಿ ಕನ್ನಡ ಮಣ್ಣಿನಲ್ಲಿ ಶಾಶ್ವತ ನೆಲೆ ಗಳಿಸಿದ್ದಾರೆ. ಇವರ ಪುಸ್ತಕ ಬಿಡುಗಡೆ ಮಾಡುವ ಮೂಲಕ “ಜಚನಿ ಶ್ರೀ” ಗಳು ನನ್ನ‌ ಅಂತರಂಗದಲ್ಲೂ ದಾಖಲಾಗಿದ್ದಾರೆ ಎನ್ನುವ ಧನ್ಯತೆಯನ್ನು ಅರ್ಪಿಸಿ ಮಾತು ಮುಗಿಸುತ್ತೇನೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!