ಜಚನಿ‌ ಶ್ರೀಗಳು ಚರ್ಮ ಶುದ್ಧಿಗಿಂತ ಅಂತರಂಗ ಶುದ್ಧಿಗೆ, ಸಾಮಾಜಿಕ ಶುದ್ಧಿಗೆ ಮಹತ್ವ ನೀಡಿದರು: ಕೆ.ವಿ.ಪಿ

ಬೆಂಗಳೂರು : ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ: ಕೆ.ವಿ.ಪ್ರಭಾಕರ್ ಶ್ರೀ ಜಚನಿ‌ ಅಧ್ಯಯನ‌ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ” ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ಮನುಷ್ಯರನ್ನು ಮುಟ್ಟಿಸಿಕೊಳ್ಳದ ಚರ್ಮಶುದ್ಧಿಯ ಅಧ್ಯಾತ್ಮದ ಗೊಡ್ಡುತನವನ್ನು ಧಿಕ್ಕರಿಸಿ 1948ರಲ್ಲೇ ದಲಿತ ಸಮುದಾಯಕ್ಕೆ ತಮ್ಮ ಮಠವನ್ನು ಮುಕ್ತಗೊಳಿಸಿದ ಜಚನಿ ಶ್ರೀಗಳು ಸಾಮಾಜಿಕ ಮತ್ತು ಅಂತರಂಗದ ಶುದ್ಧಿಯನ್ನೇ ತಮ್ಮ ಅಧ್ಯಾತ್ಮದ ಉದ್ದೇಶವನ್ನಾಗಿಸಿಕೊಂಡಿದ್ದರು ಎಂದು ವಿವರಿಸಿದರು.

ಆಡು ಮುಟ್ಟದ ಸೊಪ್ಪಿಲ್ಲ, ಜಚನಿ ಶ್ರೀಗಳು ಸಾಹಿತ್ಯ ಕೃಷಿ ಮಾಡದ ವಿಷಯಗಳೇ ಇಲ್ಲ ಎಂದು ಹೇಳಬಹುದು. ಧಾರ್ಮಿಕ, ಅಧ್ಯಾತ್ಮಿಕದಿಂದ ದೇಶದ ತುರ್ತು ಪರಿಸ್ಥಿತಿ, ಸರ್ವಾಧಿಕಾರದವರೆಗೂ ಬರೆದಿದ್ದಾರೆ.ತಮ್ಮ ಬದುಕನ್ನು ಸಾಹಿತ್ಯ ಕೃಷಿ ಮತ್ತು ಅಧ್ಯಾತ್ಮದ ಪ್ರಸಾರಕ್ಕೆ ಮಾತ್ರ ಜಚನಿ ಶ್ರೀಗಳು ಸೀಮಿತಗೊಳಿಸಿಕೊಳ್ಳಲಿಲ್ಲ.ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಇಡೀ ರಾಜ್ಯ ಸುತ್ತಿದ ಸಾಮಾಜಿಕ ಮತ್ತು ರಾಜಕೀಯ ಹೋರಾಟಗಾರರೂ ಆಗಿದ್ದಾರೆ ಎನ್ನುವುದು ಹೊರ ಜಗತ್ತಿಗೆ ಹೆಚ್ಚಾಗಿ ಗೊತ್ತಿಲ್ಲ ಎಂದರು.

ಭೌತವಿಜ್ಞಾನದಿಂದ ಸಮುದ್ರ ವಿಜ್ಞಾನದವರೆಗೂ, ರೈತರ ಸಮಸ್ಯೆಗಳಿಂದ ಕುಡುಕರ ಸಮಸ್ಯೆಗಳವರೆಗೂ ಸಾಹಿತ್ಯ ಕೃಷಿ ಮಾಡಿದ್ದಾರೆ. ಹತ್ತಾರು ಮಂದಿ ಹಲವಾರು ಜೀವಮಾನದಲ್ಲಿ ಮಾಡಬಹುದಾದ ಸಾಧನೆಯನ್ನು ಜಚನಿ ಶ್ರೀಗಳು ಒಂದೇ ಜೀವಮಾನದಲ್ಲಿ ಮಾಡಿ ಮುಗಿಸಿದ್ದಾರೆ ಎಂದರು.ಇಂಥಾ ಜನಮುಖಿ ಅಧ್ಯಾತ್ಮಿಕ ಶಿಖರ ಸೂರ್ಯರ ಕೃತಿಯನ್ನು ಬಿಡುಗಡೆ ಮಾಡಲು ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಿಡುಮಾಮಿಡಿ ಶ್ರೀಗಳಿಗೆ ಧನ್ಯತೆಯನ್ನು ಅರ್ಪಿಸುತ್ತೇನೆ.

12ನೇ ಶತಮಾನದ ವಚನಕ್ರಾಂತಿಯ ರಾಯಭಾರಿಯಾಗಿ 20ನೇ ಶತಮಾನದಲ್ಲಿ ಜಚನಿ ಶ್ರೀಗಳು ಬೆಳಗಿದ್ದಾರೆ. 6000 ಕ್ಕೂ ಹೆಚ್ಚು ಆಧುನಿಕ ವಚನಗಳು, 400ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿರುವುದು ನನ್ನ ಕಲ್ಪನಾ ಶಕ್ತಿಗೂ ನಿಲುಕದ ಅಧ್ಯಾತ್ಮಿಕ‌ ಸಾಧನೆಯಾಗಿದೆ.ಇಂಥಾ ಮಾನವೀಯ ಸಾಧಕ ಗುರುಗಳ ಬಗ್ಗೆ ನಿಡುಮಾಮಿಡಿ ಶ್ರೀಗಳು ಸಂಪಾದಿಸಿರುವ ಈ ಪುಸ್ತಕ ಕೂಡ ಅತ್ಯಂತ ಮೌಲಿಕವಾದದ್ದು. ಈ ಪುಸ್ತಕ ಜಚನಿ ಶ್ರೀಗಳ ಒಟ್ಟಾರೆ ಸಾಧನೆಯನ್ನು ತಿಳಿಯಲು ಮತ್ತು ಅವರ ಮಾರ್ಗದಲ್ಲಿ ಹೋಗಲು ಬಯಸುವವರಿಗೆ ಹೆದ್ದಾರಿಯಾಗಿದೆ ಎಂದು ಹೇಳಲು ಬಯಸುತ್ತೇನೆ.

ಬೈಲಹೊಂಗಲದ ಅಂಬಡಗಟ್ಟಿ ಗ್ರಾಮದಲ್ಲಿ ಜನಿಸಿ, ನನ್ನ ಕೋಲಾರ ಜಿಲ್ಲೆಯ ಗೂಳೂರಿನ ನಿಡುಮಾಮಿಡಿ ಮಠದ ಪೀಠಾಧಿಪತಿಯಾಗಿ ಕೋಲಾರದ ಮಣ್ಣಿನಲ್ಲಿ ವನಚ ಕ್ರಾಂತಿಯ ಬೆಳಕಿನ ದೀವಿಗೆ ಹಚ್ಚಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.ಜಗದ್ಗುರು ಚನ್ನಬಸವರಾಜ ದೇಶೀಕೇಂದ್ರ ಶಿವಾಚಾರ್ಯ ಸ್ವಾಮಿಗಳು “ಜಚನಿ ಶ್ರೀ” ಹೆಸರಿನಲ್ಲಿ ಕನ್ನಡ ಮಣ್ಣಿನಲ್ಲಿ ಶಾಶ್ವತ ನೆಲೆ ಗಳಿಸಿದ್ದಾರೆ. ಇವರ ಪುಸ್ತಕ ಬಿಡುಗಡೆ ಮಾಡುವ ಮೂಲಕ “ಜಚನಿ ಶ್ರೀ” ಗಳು ನನ್ನ‌ ಅಂತರಂಗದಲ್ಲೂ ದಾಖಲಾಗಿದ್ದಾರೆ ಎನ್ನುವ ಧನ್ಯತೆಯನ್ನು ಅರ್ಪಿಸಿ ಮಾತು ಮುಗಿಸುತ್ತೇನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!