ICC ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಜಯ್ ಶ

ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ. ಜಯ್ ಶಾ ಅವರು ಐಸಿಸಿಯ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ ಐದನೇ ಭಾರತೀಯರಾಗಿದ್ದಾರೆ.ಇದಕ್ಕೂ ಮೊದಲು ಜಗಮೋಹನ್ ದಾಲ್ಮಿಯಾ, ಎನ್ ಶ್ರೀನಿವಾಸನ್, ಶರದ್ ಪವಾರ್ ಮತ್ತು ಶಶಾಂಕ್ ಮನೋಹರ್ ಅವರು ಐಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಐಸಿಸಿ ನಿಯಮದ ಪ್ರಕಾರ ಅಧ್ಯಕ್ಷರ ಚುನಾವಣೆಯಲ್ಲಿ 16 ಮತಗಳಿದ್ದು, ಈಗ ವಿಜೇತರಿಗೆ 9 ಮತಗಳ ಸರಳ ಬಹುಮತದ ಅಗತ್ಯವಿದೆ. ಈ ಹಿಂದೆ ಅಧ್ಯಕ್ಷರಾಗಲು ಹಾಲಿ ಇರುವವರು ಮೂರನೇ ಎರಡರಷ್ಟು ಬಹುಮತ ಪಡೆಯಬೇಕಿತ್ತು. ಪ್ರಸ್ತುತ ನಿರ್ದೇಶಕರು ಈಗ 27 ಆಗಸ್ಟ್ 2024 ರೊಳಗೆ ಮುಂದಿನ ಅಧ್ಯಕ್ಷರಿಗೆ ನಾಮನಿರ್ದೇಶನಗಳನ್ನು ಸಲ್ಲಿಸಬೇಕು ಮತ್ತು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ, ಚುನಾವಣೆಯನ್ನು ನಡೆಸಲಾಗುವುದು ಮತ್ತು ಹೊಸ ಅಧ್ಯಕ್ಷರ ಅವಧಿಯು 1 ಡಿಸೆಂಬರ್ 2024 ರಿಂದ ಪ್ರಾರಂಭವಾಗುತ್ತದೆ.

ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಜಯ್ ಶಾ ಸಂತಸ ಹಂಚಿಕೊಂಡಿದ್ದಾರೆ. ಬಿಸಿಸಿಐ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿದ ನನಗೆ ಇದೀಗ ಅತ್ಯುನ್ನತ ಜವಾಬ್ದಾರಿ ಹೆಗಲೇರಿದೆ. ಕ್ರಿಕೆಟ್‌ನನ್ನು ಮತ್ತಷ್ಟು ಜಾಗತಿಕ ಕ್ರೀಡೆಯನ್ನಾಗಿ ಮಾಡಲು ಶ್ರಮಿಸುತ್ತೇನೆ. ಎಲ್ಲಾ ಮಾದರಿ ಕ್ರಿಕೆಟ್‌ನಲ್ಲಿ ಸಮತೋಲನ ಕಾಪಾಡಿಕೊಳ್ಳುವುದು, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಕ್ರಿಕೆಟ್ ಮಾದರಿ ಕ್ರೀಡೆಯನ್ನಾಗಿ ಮಾಡುವುದು ಗುರಿಯಾಗಿದೆ. ಕ್ರಿಕೆಟ್ ಜನಪ್ರಿಯತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದೇ ಮೊದಲ ಗುರಿ ಎಂದು ಜಯ್ ಶಾ ಹೇಳಿದ್ದಾರೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!