ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್..

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.

ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ.

ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು. ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್​ಗೆ ಛೀಮಾರಿ ಹಾಕಿತ್ತು. ದರ್ಶನ್ ಅವರು ಇಷ್ಟು ದಿನ ಹೊರಗೆ ಹಾಯಾಗಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರಿಗೆ ತೊಂದರೆ ಎದುರಾಗಿದೆ. ಅವರು ಮತ್ತೆ ಜೈಲು ಸೇರು ಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!