ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್..

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.

ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ.

ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು. ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್​ಗೆ ಛೀಮಾರಿ ಹಾಕಿತ್ತು. ದರ್ಶನ್ ಅವರು ಇಷ್ಟು ದಿನ ಹೊರಗೆ ಹಾಯಾಗಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರಿಗೆ ತೊಂದರೆ ಎದುರಾಗಿದೆ. ಅವರು ಮತ್ತೆ ಜೈಲು ಸೇರು ಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!