ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್..

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.

ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ.

ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು. ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್​ಗೆ ಛೀಮಾರಿ ಹಾಕಿತ್ತು. ದರ್ಶನ್ ಅವರು ಇಷ್ಟು ದಿನ ಹೊರಗೆ ಹಾಯಾಗಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರಿಗೆ ತೊಂದರೆ ಎದುರಾಗಿದೆ. ಅವರು ಮತ್ತೆ ಜೈಲು ಸೇರು ಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!