ಜಮೀರ್–ಮಲ್ಲಿಕಾರ್ಜುನ ಸ್ನೇಹ ಗಟ್ಟಿ: ಪ್ರಚಾರಕ್ಕೆ ಬರುತ್ತಾರೆ ಎಂಬಿ ಪಾಟೀಲ್ ವಿಶ್ವಾಸ.

ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯ ಕೊನೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಇರುವ ವಿಚಾರವಾಗಿ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿ, ‘ಜಮೀರ್ ಬಂದೇ ಬರ್ತಾರೆ. ಅವರು ಕೇರಳದಲ್ಲಿದ್ದಾರೆ, ನಾನು ಅಲ್ಲೇ ಹೋಗಬೇಕಿತ್ತು ಎಂದರು. ದಾವಣಗೆರೆ ಟಿಕೆಟ್ ವಿಚಾರವಾಗಿ ಜಮೀರ್ ಅವರಿಗೆ ಸಿಟ್ಟು ಇರಬಹುದು. ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಅಂತ ಬೇಸರ ಇರಬಹುದು. ಎಲ್ಲಾ ಸಮುದಾಯಗಳಲ್ಲೂ ಇರುತ್ತದೆ. ನಾವು ಲಿಂಗಾಯತ ಸಮುದಾಯಕ್ಕೆ ಸಿಗಬೇಕು ಅಂತೇವೆ, ದಲಿತ ನಾಯಕರು ಅವರ ಸಮುದಾಯಕ್ಕೆ ಕೇಳ್ತಾರೆ. ಇದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಸಚಿವ ಜಮೀರ್ ಅವರು ಅವರ ಸಮುದಾಯನ್ನು ಪ್ರತಿನಿಧಿಸುತ್ತಾರೆ. ಹಾಗಾಗಿ ಅವರು ಮುಸ್ಲಿಮರಿಗೆ ಟಿಕೆಟ್ ಕೆಳೋದ್ರಲ್ಲಿ ತಪ್ಪೇನಿಲ್ಲ. ಜಮೀರ್ ಹಾಗೂ ಮಲ್ಲಿಕಾರ್ಜುನ್ ಆತ್ಮೀಯ‌ ಸ್ನೇಹಿತರು. ಅವರು ಯಾವಾಗ ಒಟ್ಟಿಗೆ ಕಾಣ್ತಾರೋ‌ ಗೊತ್ತಾಗಲ್ಲ. ನಮಗೆ ಅವರ ಬಗ್ಗೆ ಗೊತ್ತು.ಇಬ್ಬರು ಒಳ್ಳೆ ಸ್ನೇಹಿತರು ಎಂದರು. ಹರಿದ ಬಟ್ಟೆ ತೇಪೆ ಹಾಕಬಹುದಷ್ಟೇ
ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅಭ್ಯರ್ಥಿತನ ವಾಪಸ್ ಪಡೆದಿರಬಹುದು; ಹರಿದ ಬಟ್ಟೆಯನ್ನು ತೇಪೆ ಹಾಕಬಹುದೇ ಹೊರತು ಅದು ಹೊಸ ಬಟ್ಟೆ ಆಗುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು. ತುಂಡಾದ ಹಗ್ಗಕ್ಕೆ ಗಂಟು ಹಾಕಬಹುದೇ ಹೊರತು ಅದು ಹೊಸ ಹಗ್ಗ ಆಗುವುದಿಲ್ಲ ಎಂದರು. ಮುಸಲ್ಮಾನ ಬಂಧುಗಳೆಲ್ಲ ನಮಗೆ ಮತ ಹಾಕುತ್ತಾರೆಂದು ನಾನು ಹೇಳಲಾರೆ. ಯಾಕೆಂದರೆ ಕಾಂಗ್ರೆಸ್ಸಿನವರು ಅವರ ತಲೆಗೆ ಬಿಟ್ಟ ಹುಳಗಳು ಸತ್ತಿಲ್ಲ; ಅವು ಬದುಕಿವೆ ಎಂದು ನುಡಿದರು. ಅವರನ್ನು ದಾರಿ ತಪ್ಪಿಸಿ ನಿಮ್ಮ ಮತಬ್ಯಾಂಕ್ ಮಾಡಿದ್ದೀರಿ. ಅವರೆಲ್ಲ ವಿರೋಧ ಮಾಡಿದರೂ ದೇಶ ಆಳುತ್ತಿದ್ದೇವೆ. ಮುಸಲ್ಮಾನರು ಭಾರತದಲ್ಲಿ ಸುಭದ್ರವಾಗಿ ಬದುಕುತ್ತಿದ್ದಾರೆ ಎಂದು ತಿಳಿಸಿದರು.

ಕೇವಲ ಮುಸಲ್ಮಾನರಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಪಘಾನಿಸ್ತಾನದಲ್ಲಿ ಎಷ್ಟು ಸಮಸ್ಯೆಗಳಿವೆ ನೋಡಿ ಎಂದು ಕೇಳಿದರು. ಬಾಬಾ ಸಾಹೇಬ ಅಂಬೇಡ್ಕರರ ಸಂವಿಧಾನ ಎಲ್ಲ ರೀತಿಯ ರಕ್ಷಣೆಯನ್ನು ಅವರಿಗೂ ಕೊಟ್ಟಿದೆ. ಆದ್ದರಿಂದ ಅವರು ಸುಭದ್ರತೆಯಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು. ಮನುವಾದ ಬದುಕಿರುವುದು ಕಾಂಗ್ರೆಸ್ಸಿನ ತಲೆಯಲ್ಲಿ ಮಾತ್ರ ಎಂದು ಟೀಕಿಸಿದರು. ಸರ್ವರಿಗೂ ಸಮಪಾಲು, ಸಮಬಾಳು ಕೊಡುವುದು ಬಿಜೆಪಿಯ ಕರ್ತವ್ಯ. ಅದನ್ನು ಮಾಡುತ್ತಿದ್ದೇವೆ ಎಂದರು. ಕಾಂಗ್ರೆಸ್ಸಿಗರೇ, ಬಿಜೆಪಿ ಗುಮ್ಮ ತೋರಿಸಿ ಎಷ್ಟು ದಿನ ನೀವು ಮುಸಲ್ಮಾನರನ್ನು ಇಟ್ಟುಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದರು. ಅವರಲ್ಲೂ ಯುವಕರು, ತಿಳಿದವರು ಇದ್ದು ಯೋಚನೆ ಮಾಡುತ್ತಾರೆ. ಕಾಂಗ್ರೆಸ್ ನಮಗೇನು ಮಾಡಿದೆ? ಪ್ರಧಾನಮಂತ್ರಿ ಮೋದಿಯವರು ನಮಗೇನಾದರೂ ಅನ್ಯಾಯ, ವಂಚನೆ ಮಾಡಿದ್ದಾರಾ ಎಂದು ಯೋಚಿಸುತ್ತಾರೆ. ಆ ಜನಾಂಗಗಳು ಯೋಚನೆ ಮಾಡಿ ಸ್ವಾಭಿಮಾನವನ್ನು ಉಳಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!