ಜಮೀರ್–ಮಲ್ಲಿಕಾರ್ಜುನ ಸ್ನೇಹ ಗಟ್ಟಿ: ಪ್ರಚಾರಕ್ಕೆ ಬರುತ್ತಾರೆ ಎಂಬಿ ಪಾಟೀಲ್ ವಿಶ್ವಾಸ.

ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯ ಕೊನೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಇರುವ ವಿಚಾರವಾಗಿ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿ, ‘ಜಮೀರ್ ಬಂದೇ ಬರ್ತಾರೆ. ಅವರು ಕೇರಳದಲ್ಲಿದ್ದಾರೆ, ನಾನು ಅಲ್ಲೇ ಹೋಗಬೇಕಿತ್ತು ಎಂದರು. ದಾವಣಗೆರೆ ಟಿಕೆಟ್ ವಿಚಾರವಾಗಿ ಜಮೀರ್ ಅವರಿಗೆ ಸಿಟ್ಟು ಇರಬಹುದು. ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಅಂತ ಬೇಸರ ಇರಬಹುದು. ಎಲ್ಲಾ ಸಮುದಾಯಗಳಲ್ಲೂ ಇರುತ್ತದೆ. ನಾವು ಲಿಂಗಾಯತ ಸಮುದಾಯಕ್ಕೆ ಸಿಗಬೇಕು ಅಂತೇವೆ, ದಲಿತ ನಾಯಕರು ಅವರ ಸಮುದಾಯಕ್ಕೆ ಕೇಳ್ತಾರೆ. ಇದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಸಚಿವ ಜಮೀರ್ ಅವರು ಅವರ ಸಮುದಾಯನ್ನು ಪ್ರತಿನಿಧಿಸುತ್ತಾರೆ. ಹಾಗಾಗಿ ಅವರು ಮುಸ್ಲಿಮರಿಗೆ ಟಿಕೆಟ್ ಕೆಳೋದ್ರಲ್ಲಿ ತಪ್ಪೇನಿಲ್ಲ. ಜಮೀರ್ ಹಾಗೂ ಮಲ್ಲಿಕಾರ್ಜುನ್ ಆತ್ಮೀಯ‌ ಸ್ನೇಹಿತರು. ಅವರು ಯಾವಾಗ ಒಟ್ಟಿಗೆ ಕಾಣ್ತಾರೋ‌ ಗೊತ್ತಾಗಲ್ಲ. ನಮಗೆ ಅವರ ಬಗ್ಗೆ ಗೊತ್ತು.ಇಬ್ಬರು ಒಳ್ಳೆ ಸ್ನೇಹಿತರು ಎಂದರು. ಹರಿದ ಬಟ್ಟೆ ತೇಪೆ ಹಾಕಬಹುದಷ್ಟೇ
ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅಭ್ಯರ್ಥಿತನ ವಾಪಸ್ ಪಡೆದಿರಬಹುದು; ಹರಿದ ಬಟ್ಟೆಯನ್ನು ತೇಪೆ ಹಾಕಬಹುದೇ ಹೊರತು ಅದು ಹೊಸ ಬಟ್ಟೆ ಆಗುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು. ತುಂಡಾದ ಹಗ್ಗಕ್ಕೆ ಗಂಟು ಹಾಕಬಹುದೇ ಹೊರತು ಅದು ಹೊಸ ಹಗ್ಗ ಆಗುವುದಿಲ್ಲ ಎಂದರು. ಮುಸಲ್ಮಾನ ಬಂಧುಗಳೆಲ್ಲ ನಮಗೆ ಮತ ಹಾಕುತ್ತಾರೆಂದು ನಾನು ಹೇಳಲಾರೆ. ಯಾಕೆಂದರೆ ಕಾಂಗ್ರೆಸ್ಸಿನವರು ಅವರ ತಲೆಗೆ ಬಿಟ್ಟ ಹುಳಗಳು ಸತ್ತಿಲ್ಲ; ಅವು ಬದುಕಿವೆ ಎಂದು ನುಡಿದರು. ಅವರನ್ನು ದಾರಿ ತಪ್ಪಿಸಿ ನಿಮ್ಮ ಮತಬ್ಯಾಂಕ್ ಮಾಡಿದ್ದೀರಿ. ಅವರೆಲ್ಲ ವಿರೋಧ ಮಾಡಿದರೂ ದೇಶ ಆಳುತ್ತಿದ್ದೇವೆ. ಮುಸಲ್ಮಾನರು ಭಾರತದಲ್ಲಿ ಸುಭದ್ರವಾಗಿ ಬದುಕುತ್ತಿದ್ದಾರೆ ಎಂದು ತಿಳಿಸಿದರು.

ಕೇವಲ ಮುಸಲ್ಮಾನರಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಪಘಾನಿಸ್ತಾನದಲ್ಲಿ ಎಷ್ಟು ಸಮಸ್ಯೆಗಳಿವೆ ನೋಡಿ ಎಂದು ಕೇಳಿದರು. ಬಾಬಾ ಸಾಹೇಬ ಅಂಬೇಡ್ಕರರ ಸಂವಿಧಾನ ಎಲ್ಲ ರೀತಿಯ ರಕ್ಷಣೆಯನ್ನು ಅವರಿಗೂ ಕೊಟ್ಟಿದೆ. ಆದ್ದರಿಂದ ಅವರು ಸುಭದ್ರತೆಯಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು. ಮನುವಾದ ಬದುಕಿರುವುದು ಕಾಂಗ್ರೆಸ್ಸಿನ ತಲೆಯಲ್ಲಿ ಮಾತ್ರ ಎಂದು ಟೀಕಿಸಿದರು. ಸರ್ವರಿಗೂ ಸಮಪಾಲು, ಸಮಬಾಳು ಕೊಡುವುದು ಬಿಜೆಪಿಯ ಕರ್ತವ್ಯ. ಅದನ್ನು ಮಾಡುತ್ತಿದ್ದೇವೆ ಎಂದರು. ಕಾಂಗ್ರೆಸ್ಸಿಗರೇ, ಬಿಜೆಪಿ ಗುಮ್ಮ ತೋರಿಸಿ ಎಷ್ಟು ದಿನ ನೀವು ಮುಸಲ್ಮಾನರನ್ನು ಇಟ್ಟುಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದರು. ಅವರಲ್ಲೂ ಯುವಕರು, ತಿಳಿದವರು ಇದ್ದು ಯೋಚನೆ ಮಾಡುತ್ತಾರೆ. ಕಾಂಗ್ರೆಸ್ ನಮಗೇನು ಮಾಡಿದೆ? ಪ್ರಧಾನಮಂತ್ರಿ ಮೋದಿಯವರು ನಮಗೇನಾದರೂ ಅನ್ಯಾಯ, ವಂಚನೆ ಮಾಡಿದ್ದಾರಾ ಎಂದು ಯೋಚಿಸುತ್ತಾರೆ. ಆ ಜನಾಂಗಗಳು ಯೋಚನೆ ಮಾಡಿ ಸ್ವಾಭಿಮಾನವನ್ನು ಉಳಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು