ಕಬಿನಿ ಜಲಾಶಯ ಭೂಮಿ, ಸಮನ್ಸ್ ಜಾರಿ ಮಾಡಿದ ಕೋರ್ಟ್.

ಮೈಸೂರು : ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕು ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಭೂಮಿ ಅಡವಿಟ್ಟು ನೂರಾರು ಕೋಟಿ ಸಾಲ ಪಡೆದಿದ್ದ ಪ್ರಕರಣ, ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿ ಬದಲಿಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಸುಭಾಷ್ ಪವರ್ ಮ್ಯಾನೇಜ್‌ಮೆಂಟ್ ವಿರುದ್ಧ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.


ಪ್ರಕರಣ ಸಂಬಂಧ ವಕೀಲ ಬಾಲಚಂದ್ರ ಎಂಬುವವರು ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದು ಸುಭಾಷ್ ಪವರ್ ಮ್ಯಾನೇಜ್‌ಮೆಂಟ್ ಗೆ ಜೂನ್ 28 ನೇ ತಾರೀಖು ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್ ಜಾರಿಮಾಡಿದೆ. ಪ್ರತಿನಿಧಿತ್ವ ರೆಪ್ರೆಸೆಂಟಿಟಿವ್ ಕ್ಯಾರೆಕ್ಟರ್ ಸೂಟ್ ಅಡಿ ಒಎಸ್ ದಾಖಲು ಮಾಡಲಾಗಿದ್ದು, 74/2025 ಕೇಸ್ ನಂ. ಬಾಲಚಂದ್ರ v/s ಚೀಫ್ ಸೆಕ್ರೆಟರಿ, ಕರ್ನಾಟಕ ಸ್ಟೇಟ್ ಚೀಫ್ ಸೆಕ್ರೆಟರಿ, ಕಾವೇರಿ ನೀರಾವರಿ ನಿಗಮದ ಸೂಪರಿಡೆಂಟ್ ಇಂಜಿನಿಯರ್, ಚೀಫ್ ಇಂಜಿನಿಯರ್, ಎಕ್ಸಿಕ್ಯುಟಿವ್ ಎಂಜಿನಿಯರ್, ಕಬಿನಿ ಎಇಇ ಚಂದ್ರಶೇಖರ್, ಸುಭಾಷ್ ಪವರ್ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್, ಸೆಂದಿಲ್, ಸೀನಿಯರ್ ಮ್ಯಾನೇಜರ್, ತಹಶಿಲ್ದಾರ್ ಮೋಹನಕುಮಾರಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿಯಲ್ಲಿ ಸುಭಾಷ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಎಂದು ದಾಖಲೆ ಪಡೆದು ಸಾಲ ಪಡೆಯಲಾಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿ ಬಳಿಕ ಆರ್ ಟಿಸಿ ಮರುಬದಲು, ನೂರಾರು ಕೋಟಿ ಸಾಲ ಪಾವತಿ ಮಾಡಲಾಗಿತ್ತು. ಈ ನಡುವೆ ಇದೀಗ ಜೂನ್ 28 ರಂದು ಕೋರ್ಟ್‌ಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!