ಅ.31ಕ್ಕೆ ಒಟಿಟಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ಲಗ್ಗೆ ; ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?

‘ಕಾಂತಾರ ಚಾಪ್ಟರ್ 1’: ಚಿತ್ರ ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೂ ಕೇವಲ ಒಂದು ತಿಂಗಳಲ್ಲಿ ಅಕ್ಟೋಬರ್ 31ಕ್ಕೆ ಅಮೆಜಾನ್ ಪ್ರೈಮ್ ಒಟಿಟಿಗೆ ಸಿನಿಮಾ ಲಗ್ಗೆ ಇಡಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಚಿತ್ರವನ್ನು ಬೇಗನೆ ಒಟಿಟಿಗೆ ತರಲು ಕಾರಣ ಏನು? ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾ ಕೇವಲ ಒಂದು ತಿಂಗಳಿಗೆ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಹೌದು, ಅಕ್ಟೋಬರ್ 2ರಂದು ಥಿಯೇಟರ್​ನಲ್ಲಿ ರಿಲೀಸ್ ಆದ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಚಿತ್ರ ಅಕ್ಟೋಬರ್ 31ಕ್ಕೆ ಒಟಿಟಿಗೆ ಕಾಲಿಡುತ್ತಿದೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವ ಮಧ್ಯೆಯೂ ಈ ನಿರ್ಧಾರ ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ನಡೆದಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾರತದ ಕಲೆಕ್ಷನ್ 592 ಕೋಟಿ ರೂಪಾಯಿ. ಅಕ್ಟೋಬರ್ 27ರಂದು (ನಾಲ್ಕನೇ ಸೋಮವಾರ) ಸಿನಿಮಾ 3.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದರೆ, ವಾರದ ದಿನವೂ ಸಿನಿಮಾ ಉತ್ತಮವಾಗಿಯೇ ಗಳಿಕೆ ಮಾಡುತ್ತಿದೆ. ಮುಂಬರೋ ವೀಕೆಂಡ್​ನಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇತ್ತು. ಆದಾಗ್ಯೂ ಸಿನಿಮಾನ ಒಟಿಟಿಗೆ ತರುವ ನಿರ್ಧಾರ ಮಾಡಲಾಗಿದೆ. ಇದಕ್ಕೆ ಅಸಲಿ ಕಾರಣ ಏನು ಎಂಬುದು ರಿವೀಲ್ ಆಗಿದೆ.

‘ಕಾಂತಾರ’ ಚಿತ್ರವನ್ನು ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿತ್ತು. ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಇದೇ ಒಟಿಟಿ ಸಂಸ್ಥೆ ಖರೀದಿಸಿದೆ. ಅಕ್ಟೋಬರ್ 31ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ಬಿಡುಗಡೆ ಕಾಣಲಿದೆ. ಕೇವಲ ಒಂದು ತಿಂಗಳಿಗೆ ಒಟಿಟಿಗೆ ಬರಲು ಕಾರಣ ಪ್ರೈಮ್ ವಿಡಿಯೋ ಹಾಗೂ ಹೊಂಬಾಳೆ ಮಧ್ಯೆ ಆದ ಒಪ್ಪಂದ.

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣದಿಂದಲೇ ಅಮೇಜಾನ್ ಪ್ರೈಮ್ ವಿಡಿಯೋದವರು 125 ಕೋಟಿ ರೂಪಾಯಿ ನೀಡಿ ಸಿನಿಮಾನ ಖರೀದಿ ಮಾಡಿದೆ ಎನ್ನಲಾಗಿದೆ. ಇಷ್ಟು ದೊಡ್ಡ ಮೊತ್ತ ನೀಡಿದ್ದರಿಂದ ಒಂದೇ ತಿಂಗಳಿಗೆ ಚಿತ್ರವನ್ನು ಒಟಿಟಿಗೆ ತರಲು ಒಪ್ಪಿಗೆ ನೀಡಬೇಕು ಎಂಬ ಷರತ್ತು ಇತ್ತು. ಈ ಷರತ್ತಿಗೆ ಹೊಂಬಾಳೆ ಒಪ್ಪಿಗೆ ಸೂಚಿಸಿತ್ತು ಎನ್ನಲಾಗಿದೆ. ಹೀಗಾಗಿಯೇ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಬರುತ್ತಿದೆ. ಈಗಾಗಲೇ ಚಿತ್ರ ಥಿಯೇಟರ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಅಂದುಕೊಂಡತೆ ಸಿನಿಮಾ ಒಟಿಟಿಯಲ್ಲಿ ಬಂದಿದ್ದಕ್ಕೆ ಅವರ ಕಡೆಯಿಂದಲೂ ದೊಡ್ಡ ಮೊತ್ತದ ಹಣ ಸಿಗಲಿದೆ.

‘ಕಾಂತಾರ’ ಸಿನಿಮಾ ಮಾಡುವಾಗ ಅಷ್ಟು ಒಳ್ಳೆಯ ರೆಸ್ಪಾನ್ಸ್ ಪಡೆಯುತ್ತದೆ ಎಂಬ ಕಲ್ಪನೆ ತಂಡದವರಿಗೂ ಇರಲಿಲ್ಲ. ಹೀಗಾಗಿ ಅಮೇಜಾನ್ ಜೊತೆ ಒಪ್ಪಂದ ಮಾಡಿಕೊಂಡು, ಬೇಗನೆ ಸಿನಿಮಾನ ಒಟಿಟಿಗೆ ತರಲು ಒಪ್ಪಂದ ಆಗಿತ್ತು. ನಂತರ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ಪರಭಾಷೆಯಲ್ಲೂ ಬಿಡುಗಡೆ ಮಾಡಲಾಯಿತು. ಹೀಗಾಗಿ, ಒಟಿಟಿ ರಿಲೀಸ್ ದಿನಾಂಕವನ್ನು ಪ್ರೈಮ್ ವಿಡಿಯೋ ಮುಂದಕ್ಕೆ ಹಾಕಿತ್ತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!