ಅ.31ಕ್ಕೆ ಒಟಿಟಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ಲಗ್ಗೆ ; ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?

‘ಕಾಂತಾರ ಚಾಪ್ಟರ್ 1’: ಚಿತ್ರ ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೂ ಕೇವಲ ಒಂದು ತಿಂಗಳಲ್ಲಿ ಅಕ್ಟೋಬರ್ 31ಕ್ಕೆ ಅಮೆಜಾನ್ ಪ್ರೈಮ್ ಒಟಿಟಿಗೆ ಸಿನಿಮಾ ಲಗ್ಗೆ ಇಡಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಚಿತ್ರವನ್ನು ಬೇಗನೆ ಒಟಿಟಿಗೆ ತರಲು ಕಾರಣ ಏನು? ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾ ಕೇವಲ ಒಂದು ತಿಂಗಳಿಗೆ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಹೌದು, ಅಕ್ಟೋಬರ್ 2ರಂದು ಥಿಯೇಟರ್​ನಲ್ಲಿ ರಿಲೀಸ್ ಆದ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಚಿತ್ರ ಅಕ್ಟೋಬರ್ 31ಕ್ಕೆ ಒಟಿಟಿಗೆ ಕಾಲಿಡುತ್ತಿದೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವ ಮಧ್ಯೆಯೂ ಈ ನಿರ್ಧಾರ ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ನಡೆದಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾರತದ ಕಲೆಕ್ಷನ್ 592 ಕೋಟಿ ರೂಪಾಯಿ. ಅಕ್ಟೋಬರ್ 27ರಂದು (ನಾಲ್ಕನೇ ಸೋಮವಾರ) ಸಿನಿಮಾ 3.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದರೆ, ವಾರದ ದಿನವೂ ಸಿನಿಮಾ ಉತ್ತಮವಾಗಿಯೇ ಗಳಿಕೆ ಮಾಡುತ್ತಿದೆ. ಮುಂಬರೋ ವೀಕೆಂಡ್​ನಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇತ್ತು. ಆದಾಗ್ಯೂ ಸಿನಿಮಾನ ಒಟಿಟಿಗೆ ತರುವ ನಿರ್ಧಾರ ಮಾಡಲಾಗಿದೆ. ಇದಕ್ಕೆ ಅಸಲಿ ಕಾರಣ ಏನು ಎಂಬುದು ರಿವೀಲ್ ಆಗಿದೆ.

‘ಕಾಂತಾರ’ ಚಿತ್ರವನ್ನು ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿತ್ತು. ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಇದೇ ಒಟಿಟಿ ಸಂಸ್ಥೆ ಖರೀದಿಸಿದೆ. ಅಕ್ಟೋಬರ್ 31ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ಬಿಡುಗಡೆ ಕಾಣಲಿದೆ. ಕೇವಲ ಒಂದು ತಿಂಗಳಿಗೆ ಒಟಿಟಿಗೆ ಬರಲು ಕಾರಣ ಪ್ರೈಮ್ ವಿಡಿಯೋ ಹಾಗೂ ಹೊಂಬಾಳೆ ಮಧ್ಯೆ ಆದ ಒಪ್ಪಂದ.

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣದಿಂದಲೇ ಅಮೇಜಾನ್ ಪ್ರೈಮ್ ವಿಡಿಯೋದವರು 125 ಕೋಟಿ ರೂಪಾಯಿ ನೀಡಿ ಸಿನಿಮಾನ ಖರೀದಿ ಮಾಡಿದೆ ಎನ್ನಲಾಗಿದೆ. ಇಷ್ಟು ದೊಡ್ಡ ಮೊತ್ತ ನೀಡಿದ್ದರಿಂದ ಒಂದೇ ತಿಂಗಳಿಗೆ ಚಿತ್ರವನ್ನು ಒಟಿಟಿಗೆ ತರಲು ಒಪ್ಪಿಗೆ ನೀಡಬೇಕು ಎಂಬ ಷರತ್ತು ಇತ್ತು. ಈ ಷರತ್ತಿಗೆ ಹೊಂಬಾಳೆ ಒಪ್ಪಿಗೆ ಸೂಚಿಸಿತ್ತು ಎನ್ನಲಾಗಿದೆ. ಹೀಗಾಗಿಯೇ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಬರುತ್ತಿದೆ. ಈಗಾಗಲೇ ಚಿತ್ರ ಥಿಯೇಟರ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಅಂದುಕೊಂಡತೆ ಸಿನಿಮಾ ಒಟಿಟಿಯಲ್ಲಿ ಬಂದಿದ್ದಕ್ಕೆ ಅವರ ಕಡೆಯಿಂದಲೂ ದೊಡ್ಡ ಮೊತ್ತದ ಹಣ ಸಿಗಲಿದೆ.

‘ಕಾಂತಾರ’ ಸಿನಿಮಾ ಮಾಡುವಾಗ ಅಷ್ಟು ಒಳ್ಳೆಯ ರೆಸ್ಪಾನ್ಸ್ ಪಡೆಯುತ್ತದೆ ಎಂಬ ಕಲ್ಪನೆ ತಂಡದವರಿಗೂ ಇರಲಿಲ್ಲ. ಹೀಗಾಗಿ ಅಮೇಜಾನ್ ಜೊತೆ ಒಪ್ಪಂದ ಮಾಡಿಕೊಂಡು, ಬೇಗನೆ ಸಿನಿಮಾನ ಒಟಿಟಿಗೆ ತರಲು ಒಪ್ಪಂದ ಆಗಿತ್ತು. ನಂತರ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ಪರಭಾಷೆಯಲ್ಲೂ ಬಿಡುಗಡೆ ಮಾಡಲಾಯಿತು. ಹೀಗಾಗಿ, ಒಟಿಟಿ ರಿಲೀಸ್ ದಿನಾಂಕವನ್ನು ಪ್ರೈಮ್ ವಿಡಿಯೋ ಮುಂದಕ್ಕೆ ಹಾಕಿತ್ತು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!