ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯ ಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. ಕೂಡಲೇ ನೀತಿ ನಿರೂಪಣೆ ರಚಿಸಲು ಒತ್ತಾಯ ಮಾಡಿದ್ದು, ಬಡತನ ಕಾಯುವುದಿಲ್ಲ ಎಂದಿದ್ದಾರೆ. ತಾವು ಮಧ್ಯಪ್ರವೇಶಿಸುವುದಾಗಿ ಭರವಸೆ ನೀಡಿರುವ ರಾಹುಲ್ ಗಾಂಧಿ ಸಹಾಯ ಮಾಡುವ ಆಶ್ವಾಸನೆ ನೀಡಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಂತರ ಬೈಕ್ ಟ್ಯಾಕ್ಸಿ ಚಾಲಕರು ತಮ್ಮ ಸಮಸ್ಯೆಗೆ ಪರಿಹಾರ ಸಿಗುವ ಭರವಸೆಯಲ್ಲಿದ್ದಾರೆ. ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪ್ರತಿನಿಧಿಗಳು ಇಂದು ನವದೆಹಲಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. 6 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಅವರ ಕುಟುಂಬಗಳನ್ನು ಪ್ರತಿನಿಧಿಸುವ ಸಂಘದ ಪ್ರತಿನಿಧಿಗಳ ತಂಡ ಬೈಕ್ ಟ್ಯಾಕ್ಸಿ ಸೇವೆಯ ಸ್ಥಗಿತದಿಂದ ಉಂಟಾಗಿರುವ ಗಂಭೀರ ಜೀವನೋಪಾಯ ಸಂಕಷ್ಟಗಳನ್ನು ವಿವರಿಸಿದೆ.

 

ನನ್ನ ಸಿನಿಮಾ ಸೋಲಲು ಅವನೇ ಕಾರಣ ಯಶ್ ತಾಯಿ ಪುಷ್ಪ ದೂರು.

ಬೈಕ್ ಟ್ಯಾಕ್ಸಿ ಚಾಲಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಹುಲ್ ಗಾಂಧಿ, ಅವರಿಗೆ ಬೆಂಬಲದ ಭರವಸೆ ನೀಡಿದ್ದಾರೆ. ಇದು ಜೀವನೋಪಾಯ ಮತ್ತು ಗೌರವಕ್ಕಾಗಿ ಹೋರಾಡುತ್ತಿರುವ ಸಾವಿರಾರು ಯುವ ಅಸಂಘಟಿತ ಕಾರ್ಮಿಕರಿಗೆ ಹೊಸ ಭರವಸೆ ಮೂಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕದ ಲಕ್ಷಾಂತರ ಅಸಂಘಟಿತ ಕಾರ್ಮಿಕರ ಧ್ವನಿಯನ್ನು ಪ್ರತಿನಿಧಿಸುವ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘಕ್ಕೆ ದೊಡ್ಡ ಬೆಂಬಲ ಸಿಕ್ಕಿದಂತಾಗಿದೆ. ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ಸಂಘದ ಸದಸ್ಯರು, ಬೈಕ್ ಟ್ಯಾಕ್ಸಿ ನಿಷೇಧದಿಂದ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಎದುರಿಸುತ್ತಿರುವ ಜೀವನೋಪಾಯ ಸಂಕಷ್ಟವನ್ನು ವಿವರಿಸಿ, ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಟ್ಟಿನಲ್ಲಿ ಸ್ಪಷ್ಟ ನೀತಿ ರೂಪಿಸಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ವಿನಂತಿಸಿದ್ದಾರೆ.

ಸಂಘದ ಪ್ರತಿನಿಧಿಗಳ ಮಾತುಗಳನ್ನು ಶ್ರದ್ಧೆಯಿಂದ ಕೇಳಿರುವ ರಾಹುಲ್ ಗಾಂಧಿ, ಜೀವನ ನಡೆಸಲು ಹೋರಾಡುತ್ತಿರುವ ಯುವ ಕಾರ್ಮಿಕರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಅವರ ಈ ಭರವಸೆಯಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಚಾಲಕರು ಮತ್ತು ಅವರ ಕುಟುಂಬಗಳಿಗೆ ಹೊಸ ಭರವಸೆ ಮೂಡಿದಂತಾಗಿದೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘವು, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಮರ್ಪಕ ನೀತಿಯನ್ನು ರೂಪಿಸುವಂತೆ ಮನವಿ ಮಾಡಿಕೊಂಡಿದೆ. ನೀತಿ ರೂಪಿಸುವವರೆಗೆ, ಕಾರ್ಮಿಕರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳದೆ ತಕ್ಷಣ ಸೇವೆ ಪುನರಾರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು