ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯ ಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. ಕೂಡಲೇ ನೀತಿ ನಿರೂಪಣೆ ರಚಿಸಲು ಒತ್ತಾಯ ಮಾಡಿದ್ದು, ಬಡತನ ಕಾಯುವುದಿಲ್ಲ ಎಂದಿದ್ದಾರೆ. ತಾವು ಮಧ್ಯಪ್ರವೇಶಿಸುವುದಾಗಿ ಭರವಸೆ ನೀಡಿರುವ ರಾಹುಲ್ ಗಾಂಧಿ ಸಹಾಯ ಮಾಡುವ ಆಶ್ವಾಸನೆ ನೀಡಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಂತರ ಬೈಕ್ ಟ್ಯಾಕ್ಸಿ ಚಾಲಕರು ತಮ್ಮ ಸಮಸ್ಯೆಗೆ ಪರಿಹಾರ ಸಿಗುವ ಭರವಸೆಯಲ್ಲಿದ್ದಾರೆ. ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪ್ರತಿನಿಧಿಗಳು ಇಂದು ನವದೆಹಲಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. 6 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಅವರ ಕುಟುಂಬಗಳನ್ನು ಪ್ರತಿನಿಧಿಸುವ ಸಂಘದ ಪ್ರತಿನಿಧಿಗಳ ತಂಡ ಬೈಕ್ ಟ್ಯಾಕ್ಸಿ ಸೇವೆಯ ಸ್ಥಗಿತದಿಂದ ಉಂಟಾಗಿರುವ ಗಂಭೀರ ಜೀವನೋಪಾಯ ಸಂಕಷ್ಟಗಳನ್ನು ವಿವರಿಸಿದೆ.

 

ನನ್ನ ಸಿನಿಮಾ ಸೋಲಲು ಅವನೇ ಕಾರಣ ಯಶ್ ತಾಯಿ ಪುಷ್ಪ ದೂರು.

ಬೈಕ್ ಟ್ಯಾಕ್ಸಿ ಚಾಲಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಹುಲ್ ಗಾಂಧಿ, ಅವರಿಗೆ ಬೆಂಬಲದ ಭರವಸೆ ನೀಡಿದ್ದಾರೆ. ಇದು ಜೀವನೋಪಾಯ ಮತ್ತು ಗೌರವಕ್ಕಾಗಿ ಹೋರಾಡುತ್ತಿರುವ ಸಾವಿರಾರು ಯುವ ಅಸಂಘಟಿತ ಕಾರ್ಮಿಕರಿಗೆ ಹೊಸ ಭರವಸೆ ಮೂಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕದ ಲಕ್ಷಾಂತರ ಅಸಂಘಟಿತ ಕಾರ್ಮಿಕರ ಧ್ವನಿಯನ್ನು ಪ್ರತಿನಿಧಿಸುವ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘಕ್ಕೆ ದೊಡ್ಡ ಬೆಂಬಲ ಸಿಕ್ಕಿದಂತಾಗಿದೆ. ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ಸಂಘದ ಸದಸ್ಯರು, ಬೈಕ್ ಟ್ಯಾಕ್ಸಿ ನಿಷೇಧದಿಂದ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಎದುರಿಸುತ್ತಿರುವ ಜೀವನೋಪಾಯ ಸಂಕಷ್ಟವನ್ನು ವಿವರಿಸಿ, ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಟ್ಟಿನಲ್ಲಿ ಸ್ಪಷ್ಟ ನೀತಿ ರೂಪಿಸಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ವಿನಂತಿಸಿದ್ದಾರೆ.

ಸಂಘದ ಪ್ರತಿನಿಧಿಗಳ ಮಾತುಗಳನ್ನು ಶ್ರದ್ಧೆಯಿಂದ ಕೇಳಿರುವ ರಾಹುಲ್ ಗಾಂಧಿ, ಜೀವನ ನಡೆಸಲು ಹೋರಾಡುತ್ತಿರುವ ಯುವ ಕಾರ್ಮಿಕರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಅವರ ಈ ಭರವಸೆಯಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಚಾಲಕರು ಮತ್ತು ಅವರ ಕುಟುಂಬಗಳಿಗೆ ಹೊಸ ಭರವಸೆ ಮೂಡಿದಂತಾಗಿದೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘವು, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಮರ್ಪಕ ನೀತಿಯನ್ನು ರೂಪಿಸುವಂತೆ ಮನವಿ ಮಾಡಿಕೊಂಡಿದೆ. ನೀತಿ ರೂಪಿಸುವವರೆಗೆ, ಕಾರ್ಮಿಕರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳದೆ ತಕ್ಷಣ ಸೇವೆ ಪುನರಾರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!