ಕಾಶ್ಮೀರದ ಪಹಲ್ಗಾಮ್ ಉಗ್ರರ ದಾ*, ಮಾಹಿತಿ ಕೊರತೆ – ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.


ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕುಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!