ಅಮೆರಿಕದ ಸುಂಕ ನಿಟ್ಟಿಗೆ ಖರ್ಗೆ ಕಿಡಿ: ದೇಶದ ಹಿತ ಕಾಪಾಡಲು ಪ್ರಧಾನಿ ಮೋದಿ ವಿಫಲ, ಎಎಐಸಿಸಿ ಅಧ್ಯಕ್ಷರ ವಾಗ್ದಾಳಿ.

ನವದೆಹಲಿ: ಭಾರತೀಯ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿರುವ ಅಮೆರಿಕದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಹಿತ ಕಾಪಾಡಲು ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಮಾಜಿ ಟ್ವಿಟ್ಟರ್) ಪೋಸ್ಟ್ ಮಾಡಿದ ಖರ್ಗೆ, “ಪ್ರಧಾನಮಂತ್ರಿ ಮೋದಿಯವರು ನಗು, ಅಪ್ಪುಗೆ ಮತ್ತು ಸೆಲ್ಫಿಗಳ ಬಿಟ್ಟು ಪರಿಣಾಮಕಾರಿಯಾದ ವಿದೇಶಾಂಗ ನೀತಿಯ ಕಡೆ ಗಮನಹರಿಸಬೇಕು,” ಎಂದು ತೀವ್ರ ಟೀಕೆ ಮಾಡಿದ್ದಾರೆ.

ಅವರು ಮುಂದಾಗಿ ಹೇಳಿದರು: “ಈಗ ‘ಅಬ್ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಯ ಫಲವಾಗಿ, ಅಮೆರಿಕ ಭಾರತೀಯ ವಸ್ತುಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿದೆ. ಇದರ ಮೊದಲ ಬಲಿಯಾಗಿಯಾಗಿ ನಾವು 10 ಪ್ರಮುಖ ವಲಯಗಳಲ್ಲಿ ಸುಮಾರು ₹2.17 ಲಕ್ಷ ಕೋಟಿ ನಷ್ಟ ಅನುಭವಿಸಬಹುದು.”

ರೈತರ ಮೇಲೆ ಪರಿಣಾಮ, ಮೋದಿ ಭರವಸೆ ವಿಫಲ,

ಅಮೆರಿಕದೊಂದಿಗೆ ನಡೆದ ದ್ವಿಪಕ್ಷೀಯ ವ್ಯಾಪಾರ ಚರ್ಚೆಗಳಲ್ಲಿ ರೈತರ ಹಿತಾಸಕ್ತಿಗಳನ್ನು ಕಾಪಾಡುವುದಾಗಿ ಮೋದಿ ನೀಡಿದ ಭರವಸೆ ಇದೀಗ ಪ್ರಶ್ನೆಯಲ್ಲಿದೆ. “ಈ ಸುಂಕ ನೀತಿಯ ಪ್ರಭಾವದಿಂದಾಗಿ, ರೈತರ ಮೇಲೆ ದುಷ್ಪರಿಣಾಮ ಬೀರಲಿದೆ. ಮೋದಿ ನೀಡಿದ್ದ ಭರವಸೆ ಕೇವಲ ಮಾತಿಗೆ ಸೀಮಿತವಾಗಿದೆ,” ಎಂದು ಖರ್ಗೆ ಹೇಳಿದ್ದಾರೆ.

ಜವಳಿ ಮತ್ತು ಆಭರಣ ವಲಯಗಳಿಗೆ ಬಿಕ್ಕಟ್ಟಿನ ಸೂಚನೆ,

ಅಮೆರಿಕದ ಸುಂಕದಿಂದ ಜವಳಿ ಕ್ಷೇತ್ರ ಅತ್ಯಂತ ಗಂಭೀರ ಹಂತಕ್ಕೆ ತಲುಪಿದ್ದು, ಸುಮಾರು 5,00,000 ಉದ್ಯೋಗಗಳು ಅಪಾಯದಲ್ಲಿವೆ. ಇದೇ ರೀತಿಯಲ್ಲಿ ರತ್ನ ಮತ್ತು ಆಭರಣ ವಲಯಕ್ಕೂ ಭಾರಿ ಹೊಡೆತ ಬಿದ್ದಿದ್ದು, ಶೇಕಡಾ 50ರಷ್ಟು ಸುಂಕ ಮುಂದುವರೆದರೆ ಸುಮಾರು 1.5 ರಿಂದ 2 ಲಕ್ಷ ಉದ್ಯಮಗಳು ಮುಚ್ಚಲಿಕ್ಕಾಗುವ ಸಾಧ್ಯತೆ ಇದೆ ಎಂದು ಖರ್ಗೆ ಎಚ್ಚರಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!