ಸಲ್ಲುನಿಂದ ಕಿಚ್ಚ ಸುದೀಪ್​ಗೆ ಸಿಕ್ಕಿರೋದು ಕೋಟಿ ಬೆಲೆಬಾಳೋ ಉಡುಗೊರೆ  …

ಕಿಚ್ಚ ಸುದೀಪ್ ಅವರ 52ನೇ ಹುಟ್ಟುಹಬ್ಬ. ಈ ವೇಳೆ ಒಂದು ಹಳೆಯ ಘಟನೆ ನೆನಪಿಸಿಕೊಳ್ಳೋಣ. ಸಲ್ಮಾನ್ ಖಾನ್ ಅವರು ಸುದೀಪ್ ಅವರಿಗೆ ಐಷಾರಾಮಿ ಕಾರುಗಳು ಮತ್ತು ಜಿಮ್ ಉಪಕರಣಗಳನ್ನು ಉಡುಗೊರೆಯಾಗಿ ನೀಡಿದ್ದರು . ‘ದಬಾಂಗ್ 3’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಅವರ ನಡುವೆ ಬಲವಾದ ಬಾಂಧವ್ಯ ಬೆಳೆದಿದೆ.

ಕಿಚ್ಚ ಸುದೀಪ್ ಅಭಿಮಾನಿಗಳ ವಲಯದಲ್ಲಿ ಇಂದು (ಸೆಪ್ಟೆಂಬರ್ 2) ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಸುದೀಪ್ ಅವರಿಗೆ ಈಗ 52 ವರ್ಷ. ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.  ಅವರು ‘ತಾಯವ್ವ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಹಿಟ್ ಚಿತ್ರ ನೀಡಿದ್ದಾರೆ. ಈ ಮೊದಲು ಸಲ್ಮಾನ್ ಖಾನ್ ಜೊತೆ ಸಿನಿಮಾ ಮಾಡಿದ್ದರು. ಆಗ ಇಬ್ಬರ ಮಧ್ಯೆ ಒಳ್ಳೆಯ

ಬಾಂಡಿಂಗ್ ಬೆಳೆದಿದೆ. ಸಲ್ಲು ಕಡೆಯಿಂದ ಹಲವು ಗಿಫ್ಟ್​​ಗಳು ಕಿಚ್ಚನಿಗೆ ಸಿಕ್ಕಿದ್ದವು.

ಸುದೀಪ್ ಅವರಿಗೆ ಬಾಲಿವುಡ್ ಹೊಸದಲ್ಲ. 2008ರಲ್ಲಿ ರಿಲೀಸ್ ಆದ ‘ಫೂಂಕ್’ ಚಿತ್ರದ ಮೂಲಕ ಅವರು ಬಾಲಿವುಡ್ ಪ್ರವೇಶಿಸಿದರು. ಸಲ್ಮಾನ್ ಖಾನ್ ಅವರ ‘ದಬಂಗ್ 3’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಆದರೆ ಸುದೀಪ್ ಹಾಗೂ ಸಲ್ಲು ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು.

‘ದಂಬಂಗ್ 3’ ಸಿನಿಮಾ 2019ರಲ್ಲಿ ರಿಲೀಸ್ ಆಯಿತು. ನಟ, ಕೊರಿಯೋಗ್ರಾಫರ್ ಪ್ರಭುದೇವ ಅವರು ಈ ಸಿನಿಮಾ ನಿರ್ದೇಶನ ಮಾಡಿದರು. ಈ ಚಿತ್ರದ ಶೂಟ್ ವೇಳೆ ಸುದೀಪ್​​ಗೆ ಸಲ್ಲು ಅವರು ತಮ್ಮ ಫೇವರಿಟ್ ಜಾಕೆಟ್ ನೀಡಿದ್ದರು. ಈ ಜಾಕೆಟ್​ನಲ್ಲಿ ಸಲ್ಲು ಅವರ ಫೇವರಿಟ್ ಶ್ವಾನದ ಚಿತ್ರ ಪ್ರಿಂಟ್ ಇತ್ತು.

ಸುದೀಪ್ ಕಾರು ಪ್ರಿಯರು. ಅವರ ಬಳಿ ವಿಶೇಷ ಕಾರುಗಳ ಸಂಗ್ರಹ ಇದೆ. ಅವರಿಗೆ ಸಲ್ಲು ಬಿಎಂಡಬ್ಲ್ಯೂ ಎಂ 5 ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಆ ಸಮಯದಲ್ಲಿ ಈ ಕಾರಿನ ಬೆಲೆ 1.7 ಕೋಟಿ ರೂಪಾಯಿ ಇದ್ದವು ಎನ್ನಲಾಗಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು.

ಯಾರಿಗೂ ಗೊತ್ತಿರದ ಮತ್ತೊಂದು ವಿಚಾರ ಇದೆ. ಸುದೀಪ್ ಅವರು ಜಿಮ್ ಫ್ರೀಕ್. ನಿತ್ಯ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಈ ಕಾರಣಕ್ಕೆ ಕೋಟ್ಯಂತರ ರೂಪಾಯಿ ಬೆಲೆ ಬಾಳೋ ಜಿಮ್ ಸೆಟ್​ಗಳನ್ನು ಸಲ್ಮಾನ್ ಖಾನ್ ಅವರು ಸುದೀಪ್​ಗೆ ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ. ಇದನ್ನು ಸುದೀಪ್ ಈಗಲೂ ಕಾಯ್ದುಕೊಂಡು ಬಂದಿದ್ದಾರೆ. ಅವರು ಶೂಟ್​ಗಾಗಿ ಹೊರಗೆ ಇರುವ ವೇಳೆ ಇವುಗಳನ್ನು ತೆಗೆದುಕೊಂಡು ಹೋಗುತ್ತಾರೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!