ಸಲ್ಲುನಿಂದ ಕಿಚ್ಚ ಸುದೀಪ್​ಗೆ ಸಿಕ್ಕಿರೋದು ಕೋಟಿ ಬೆಲೆಬಾಳೋ ಉಡುಗೊರೆ  …

ಕಿಚ್ಚ ಸುದೀಪ್ ಅವರ 52ನೇ ಹುಟ್ಟುಹಬ್ಬ. ಈ ವೇಳೆ ಒಂದು ಹಳೆಯ ಘಟನೆ ನೆನಪಿಸಿಕೊಳ್ಳೋಣ. ಸಲ್ಮಾನ್ ಖಾನ್ ಅವರು ಸುದೀಪ್ ಅವರಿಗೆ ಐಷಾರಾಮಿ ಕಾರುಗಳು ಮತ್ತು ಜಿಮ್ ಉಪಕರಣಗಳನ್ನು ಉಡುಗೊರೆಯಾಗಿ ನೀಡಿದ್ದರು . ‘ದಬಾಂಗ್ 3’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಅವರ ನಡುವೆ ಬಲವಾದ ಬಾಂಧವ್ಯ ಬೆಳೆದಿದೆ.

ಕಿಚ್ಚ ಸುದೀಪ್ ಅಭಿಮಾನಿಗಳ ವಲಯದಲ್ಲಿ ಇಂದು (ಸೆಪ್ಟೆಂಬರ್ 2) ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಸುದೀಪ್ ಅವರಿಗೆ ಈಗ 52 ವರ್ಷ. ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.  ಅವರು ‘ತಾಯವ್ವ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ಹಿಟ್ ಚಿತ್ರ ನೀಡಿದ್ದಾರೆ. ಈ ಮೊದಲು ಸಲ್ಮಾನ್ ಖಾನ್ ಜೊತೆ ಸಿನಿಮಾ ಮಾಡಿದ್ದರು. ಆಗ ಇಬ್ಬರ ಮಧ್ಯೆ ಒಳ್ಳೆಯ

ಬಾಂಡಿಂಗ್ ಬೆಳೆದಿದೆ. ಸಲ್ಲು ಕಡೆಯಿಂದ ಹಲವು ಗಿಫ್ಟ್​​ಗಳು ಕಿಚ್ಚನಿಗೆ ಸಿಕ್ಕಿದ್ದವು.

ಸುದೀಪ್ ಅವರಿಗೆ ಬಾಲಿವುಡ್ ಹೊಸದಲ್ಲ. 2008ರಲ್ಲಿ ರಿಲೀಸ್ ಆದ ‘ಫೂಂಕ್’ ಚಿತ್ರದ ಮೂಲಕ ಅವರು ಬಾಲಿವುಡ್ ಪ್ರವೇಶಿಸಿದರು. ಸಲ್ಮಾನ್ ಖಾನ್ ಅವರ ‘ದಬಂಗ್ 3’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಆದರೆ ಸುದೀಪ್ ಹಾಗೂ ಸಲ್ಲು ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು.

‘ದಂಬಂಗ್ 3’ ಸಿನಿಮಾ 2019ರಲ್ಲಿ ರಿಲೀಸ್ ಆಯಿತು. ನಟ, ಕೊರಿಯೋಗ್ರಾಫರ್ ಪ್ರಭುದೇವ ಅವರು ಈ ಸಿನಿಮಾ ನಿರ್ದೇಶನ ಮಾಡಿದರು. ಈ ಚಿತ್ರದ ಶೂಟ್ ವೇಳೆ ಸುದೀಪ್​​ಗೆ ಸಲ್ಲು ಅವರು ತಮ್ಮ ಫೇವರಿಟ್ ಜಾಕೆಟ್ ನೀಡಿದ್ದರು. ಈ ಜಾಕೆಟ್​ನಲ್ಲಿ ಸಲ್ಲು ಅವರ ಫೇವರಿಟ್ ಶ್ವಾನದ ಚಿತ್ರ ಪ್ರಿಂಟ್ ಇತ್ತು.

ಸುದೀಪ್ ಕಾರು ಪ್ರಿಯರು. ಅವರ ಬಳಿ ವಿಶೇಷ ಕಾರುಗಳ ಸಂಗ್ರಹ ಇದೆ. ಅವರಿಗೆ ಸಲ್ಲು ಬಿಎಂಡಬ್ಲ್ಯೂ ಎಂ 5 ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಆ ಸಮಯದಲ್ಲಿ ಈ ಕಾರಿನ ಬೆಲೆ 1.7 ಕೋಟಿ ರೂಪಾಯಿ ಇದ್ದವು ಎನ್ನಲಾಗಿದೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು.

ಯಾರಿಗೂ ಗೊತ್ತಿರದ ಮತ್ತೊಂದು ವಿಚಾರ ಇದೆ. ಸುದೀಪ್ ಅವರು ಜಿಮ್ ಫ್ರೀಕ್. ನಿತ್ಯ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಈ ಕಾರಣಕ್ಕೆ ಕೋಟ್ಯಂತರ ರೂಪಾಯಿ ಬೆಲೆ ಬಾಳೋ ಜಿಮ್ ಸೆಟ್​ಗಳನ್ನು ಸಲ್ಮಾನ್ ಖಾನ್ ಅವರು ಸುದೀಪ್​ಗೆ ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ. ಇದನ್ನು ಸುದೀಪ್ ಈಗಲೂ ಕಾಯ್ದುಕೊಂಡು ಬಂದಿದ್ದಾರೆ. ಅವರು ಶೂಟ್​ಗಾಗಿ ಹೊರಗೆ ಇರುವ ವೇಳೆ ಇವುಗಳನ್ನು ತೆಗೆದುಕೊಂಡು ಹೋಗುತ್ತಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!