ಗಿಲ್ಲಿ & ರಕ್ಷಿತಾಗೆ ಕ್ಲಾಸ್ ತಗೊಂಡ ಕಿಚ್ಚ ಸುದೀಪ್

ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ. ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ.

ಗಿಲ್ಲಿ ಈ ವಾರದ ಟಾಸ್ಕ್‌ಗಳಲ್ಲಿ ಸೇಫ್‌ ಟೀಂನಲ್ಲಿದ್ದರೆ, ರಕ್ಷಿತಾ ನಾಮಿನೇಟೆಡ್‌ ಟೀಂನಲ್ಲಿದ್ದರು. ಆದರೆ ಯಾವಾಗ ನಾಮಿನೇಟೆಡ್‌ ಟೀಂ ವಿನ್‌ ಆಗಿ ತಮ್ಮ ಟೀಂನಿಂದ ಸೇಫ್‌ ಟೀಂಗೆ ಒಬ್ಬರನ್ನು ಕಳುಹಿಸಬೇಕು ಅಲ್ಲಿಂದ ಒಬ್ಬರನ್ನು ತಮ್ಮ ಟೀಂಗೆ ಕರೆಸಿಕೊಳ್ಳಬೇಕು ಎನ್ನುವ ಪ್ರಶ್ನೆ ಬಂದಿತ್ತೋ ಆಗ ರಕ್ಷಿತಾ ತಮ್ಮ ಟೀಂನ ನಿರ್ಧಾರದ ವಿರುದ್ಧವೇ ತಿರುಗಿ ಬಿದ್ದಿದ್ದರು. ಇದೇ ವೇಳೆ ಗಿಲ್ಲಿ ಕೂಡ ರಕ್ಷಿತಾ ತಮ್ಮ ವಂಶದ ಕುಡಿ ಹಾಗೆ ಸರಳವಾಗಿ ಸೋಲಲ್ಲ ಎಂದು ಹೇಳಿದ್ದರು.

ಇದು ನಾಮಿನೇಟೆಡ್‌ ಟೀಂನವರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಇನ್ನೊಂದು ಟಾಸ್ಕ್‌ನ ಆರಂಭಕ್ಕೂ ಮೊದಲೇ ಗಿಲ್ಲಿ ರಕ್ಷಿತಾ ಕಿವಿಯಲ್ಲಿ ಏನೋ ಹೇಳಿದ್ದು ಕೂಡ ದೊಡ್ಡ ಗಲಾಟೆಗೆ ಕಾರಣವಾಗಿತ್ತು. ಇದನ್ನೇ ಇಟ್ಟುಕೊಂಡು ಸುದೀಪ್‌ ಶನಿವಾರದ ಎಪಿಸೋಡ್‌ನಲ್ಲಿ ಗಿಲ್ಲಿ ಹಾಗೂ ರಕ್ಷಿತಾಗೆ ಕ್ಲಾಸ್‌ ತಗೊಂಡಿದ್ದಾರೆ.

ಅವರ ನಡವಳಿಕೆಯನ್ನು ಸಮರ್ಥಿಸಿಕೊಳ್ಳೋಕೆ ಹೇಳಿದ್ದಾರೆ. ಅಲ್ಲದೇ ಇವರಿಬ್ಬರ ಈ ನಡವಳಿಕೆ ಒಂದು ಟೀಂ ಮೇಲೆ ಹೇಗೆ ಪರಿಣಾಮ ಬೀರುತ್ತೆ ಅನ್ನೋದನ್ನೂ ಹೇಳಿದ್ದಾರೆ. ಇಬ್ಬರಿಗೂ ಸರಿಯಾಗೇ ಕ್ಲಾಸ್‌ ತಗೊಂಡಿದ್ದು, ಇಲ್ಲಿವರೆಗೂ ಇನೋಸೆಂಟ್‌ ತರ ಕಾಣಿಸುತ್ತಿದ್ದ ರಕ್ಷಿತಾ ಮೊದಲ ಬಾರಿ ತಾವೇ ಮಾಡಿದ್ದ ಗುಂಡಿಗೆ ಬಿದ್ದ ಹಾಗೆ ಆಗಿದ್ದಾರೆ. ಇನ್ನಾದ್ರೂ ತಪ್ಪನ್ನು ಅರಿತುಕೊಂಡು ಇವರಿಬ್ಬರು ತಿದ್ದಿಕೊಳ್ತಾರಾ? ಮುಂದಿನ ದಿನಗಳಲ್ಲಿ ನೋಡಬೇಕಷ್ಟೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು