ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆ. ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!