ಕೆ.ಎಸ್.ಡಿ.ಎಲ್: ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು.

 

 

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!