ಸ್ಟೇರಿಂಗ್ ತುಂಡಾಗಿ ಕೆರೆಗೆ ಉರುಳಿದ KSRTC ಬಸ್ : ತಪ್ಪಿದ ಭಾರೀ ಅನಾಹುತ.

ಮೈಸೂರು: ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿ ಬಿದ್ದು, 21 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಸಂಭವಿಸಿದೆ. ಗಾಯಗೊಂಡವರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ.
ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಹೆಚ್.ಡಿ.ಕೋಟೆ ಪಟ್ಟಣದಿಂದ ಹೆಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದಾಗ ಬಸ್ನ ಸ್ಟೇರಿಂಗ್ ತುಂಡಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಂತೇಗಾಲದ ಕೆರೆಗೆ ಬಸ್ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಚಾಲಕ ರವೀಶ್ ಅವರ ಮುಖ, ಗಡ್ಡಕ್ಕೆ ಪೆಟ್ಟು ಬಿದ್ದಿದೆ. ನಿರ್ವಾಹಕ ಗಣೇಶ್ ಅವರ ಬೆನ್ನು ಮೂಳೆಗೆ ಗಂಭೀರ ಪೆಟ್ಟಾಗಿದೆ.

25 ಮಂದಿ ಪ್ರಯಾಣಿಕರಿಂದ ಬಸ್: ಪ್ರಯಾಣಿಕರಲ್ಲಿ ಮಹಿಳೆ ಹಾಗೂ ಮಗುವಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸತ್ರೆಗೆ ಕಳುಹಿಸಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗಳಾದವರಿಗೆ ಆಸತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್.ಡಿ.ಕೋಟೆಯಿಂದ ಸರಗೂರು ಮಾರ್ಗವಾಗಿ ಕಾಡುಬೇಗೂರು-ಕುರ್ಣೆಗಾಲ ಮೂಲಕ ಸಾಗಿ ಕೇರಳ ಗಡಿಯ ಆಲನಹಳ್ಳಿಗೆ ತೆರಳಬೇಕಿದ್ದ ಕೆಎಸ್ಆರ್ಟಿಸಿ ಬಸ್ 25 ಮಂದಿ ಪ್ರಯಾಣಿಕರನ್ನು ಹೊತ್ತು ರಾತ್ರಿ 7.30ರ ಸುಮಾರಿನಲ್ಲಿ ಹೆಚ್.ಡಿ.ಕೋಟೆ ನಿಲ್ದಾಣದಿಂದ ಹೊರಟಿತ್ತು.

ತಪ್ಪಿದ ಭಾರೀ ಅನಾಹುತ : ಪಟ್ಟಣದಿಂದ ಸುಮಾರು ಒಂದೂವರೆ ಕಿಮೀ ದೂರ ಸಾಗುವುದರೊಳಗೆ ಬಸ್ನ ಸ್ಟೇರಿಂಗ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಎಡಗಡೆ ಕಬಿನಿ ಬಲದಂಡೆ ನಾಲೆ, ಬಲಗಡೆ ಬೊಂತ್ತೇಗಾಲ ಕೆರೆ ಇದ್ದುದರಿಂದ ಬಸ್ ಎತ್ತ ಚಲಿಸಿದರೂ ಪ್ರಯಾಣಿಕರ ಪ್ರಾಣಕ್ಕೆ ಆಪತ್ತು ಎದುರಾಗುವ ಸಂಭವ ಎದುರಾಗಿತ್ತು. ಈ ವೇಳೆ ಚಾಲಕ ಕೆರೆ ಏರಿಗೆ ಅಳವಡಿಸಿದ್ದ ಕಬ್ಬಿಣದ ತಡೆಗೋಡೆಗೆ ಗುದ್ದಿಸಿ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ಆದರೂ ಬಸ್ ಕಬ್ಬಿಣದ ತಡೆಗೋಡೆಯನ್ನು ಮುರಿದುಕೊಂಡು ಕೆರೆಗೆ ಬಿದ್ದಿದೆ.

ಬಸ್ ಕೆರೆಗೆ ಉರುಳಿದ ಜಾಗದಿಂದ ನಾಲೈದು ಅಡಿಗಳ ಅಂತರದಲ್ಲೇ ಕೆರೆಯು ಭಾರಿ ಆಳವಿತ್ತು. ಹೀಗಾಗಿ ಭಾರೀ ಅನಾಹುತ ತಪ್ಪಿದೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಯ ನೆರವಿನಿಂದ ಗಾಯಾಳುಗಳನ್ನು ಬಸ್ನಿಂದ ಹೊರ ತೆಗೆದು ಆಸ್ಪತ್ರೆಗೆ ರವಾನಿಸಲಾಯಿತು. ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಸರಗೂರು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಎಸ್ಐ ಅಶೋಕ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!