ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ!

 

ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ ಬಂಡಾಯ ನಾಯಕ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್​​ಡಿ ದೇವೇಗೌಡ, ನಿಖಿಲ್​ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡ ಬಳಿಕ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ವಿಜಯ್ ಕುಮಾರ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೆನೆ. ಮುಂದೆ ಒಂದು ದಿನ ಪಕ್ಷ ಸೇರುವ ಸಮಯ ಬರುತ್ತೆ ಎಂದು ಹೇಳಿದ್ದೆ. ದುಡಿಕೆ ರಾಜಕೀಯ ಜೀವನವನ್ನ ಹಾಳು ಮಾಡಬಾರದು.ಒಳ್ಳೆಯ ಉದ್ದೇಶಕ್ಕೆ ನಾವು ಕೈ ಜೋಡಿಸೊದ್ದೇವೆ. ಮಾಲೂರು ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಬೇಕು. ವಿಧಾನಸಭಾ ಚುನಾವಣೆ ಇನ್ನೂ ದೂರ ಇದೆ. ಅದಕ್ಕೂ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಅದು ಕಾರ್ಯಕರ್ತರ ಚುನಾವಣೆಯಾಗಿದೆ. ಮಾಲೂರು ಕ್ಷೇತ್ರದ ಕೆಲವರು ಕಾರಣಾಂತರದಿಂದ ಪಕ್ಷವನ್ನ ಬಿಟ್ಟು ಹೋಗಿದ್ರು. ಇವತ್ತು ಎಲ್ಲರು ಮತ್ತೆ ಪಕ್ಷ ಸೇರಿದ್ದಾರೆ. ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೆತ್ರದ ಬಿಜೆಪಿ ಟಿಕೆಟ್​ ಹೂಡಿ ವಿಜಯ್ ಕುಮಾರ್ ಅವರ ಬದಲಿಗೆ ಕೆ.ಎಸ್. ಮಂಜುನಾಥ್ ಗೌಡ ಅವರಿಗೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡು ಹೂಡಿ ವಿಜಯ್ ಕುಮಾರ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರ ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಯಾಕಂದ್ರೆ, ಕಾಂಗ್ರೆಸ್​​​ನ ನಂಜೇಗೌಡ ಅವರು ಕೇವಲ 250 ಮತಗಳಿಂದ ಮಾತ್ರ ಗೆದ್ದಿದ್ದರು. ಒಂದು ವೇಳೆ ಹೂಡಿ ವಿಜಯ್ ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡದಿದ್ದರೆ ಬಿಜೆಪಿ ಗೆಲ್ಲುತ್ತಿತ್ತು.

ಹೂಡಿ ವಿಜಯ್​​ ಕುಮಾರ್​​ ಜೆಡಿಎಸ್​​ ಸೇರ್ಪಡೆಗೆ ಸ್ಥಳೀಯ ಬಿಜೆಪಿ ನಾಯಕರು, ಮಂಜುನಾಥ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಜುನಾಥ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮವನ್ನು ಮುರಿಯುತ್ತಿದ್ದಾರೆ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯ ನಡುವೆ ಇದು ಬಿರುಕು ಉಂಟುಮಾಡಿದೆ ಎಂಬ ಆತಂಕ ವ್ಯಕ್ತವಾಗಿದೆ.ಮಿತ್ರ ಪಕ್ಷ ಬಿಜೆಪಿ​ ವಿರೋಧದ ನಡುವೆಯೂ ಹೂಡಿ ವಿಜಯ್ ಕುಮಾರ್ ಅವರನ್ನು ಜೆಡಿಎಸ್​​​ಗೆ ಸೇರಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಮಿತ್ರ ಪಕ್ಷಗಳ ನಡುವೆ ಸಂಬಂಧ ಹೇಗಿರುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!