ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು?

ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ರಾಮನಗರದಲ್ಲಿ SIR ಪ್ರಕ್ರಿಯೆ ಬಗ್ಗೆ ಆಕ್ಷೇಪ
ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ
ಸಮುದಾಯ ಭವನದಲ್ಲಿ ಕೂತು ಗಣತಿ ನಮೂನೆ ವಿತರಣೆ
ರಾಮನಗರ, ಜುಲೈ 02: ರಾಜ್ಯದಲ್ಲಿ ಜೂನ್​​ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮತದಾರರು ಸ್ವಯಂಪ್ರೇರಿತರಾಗಿ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ಇತ್ತ ರಾಮನಗರದಲ್ಲಿ SIR ಪ್ರಕ್ರಿಯೆ ಬಗ್ಗೆ ಆಕ್ಷೇಪಗಳು ಕೇಳಿಬಂದಿವೆ. ಬಿಎಲ್‌ಒಗಳ ಕರ್ತವ್ಯ ಲೋಪದ ಗಂಭೀರ ಆರೋಪಗಳು ಕೇಳಿಬಂದಿವೆ. ಹೀಗಾಗಿ ರಾಮನಗರ ಕ್ಷೇತ್ರದ ಪ್ರಸ್ತುತ SIR ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸುವಂತೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ
ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪಗಳು ಕಂಡುಬಂದಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಬಿಎಲ್​ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.

ಕಳ್ಳ ಮತದಾರರನ್ನ ಒಂದು ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ
ಇನ್ನು ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್‌ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ನಮ್ಮನ್ನ ಹೊರಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.

ಕಳ್ಳಮತದಾನ ಸೃಷ್ಟಿ ಮಾಡುವವರ ವಿರುದ್ಧ ಕಠಿಣ ಕ್ರಮ‌ಕ್ಕೆ ಒತ್ತಾಯ
ರಾಮನಗರದ ಬಿಡದಿ ಹೋಬಳಿಯ ಕೇತಗನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ಮುಖ್ಯಮಂತ್ರಿಗಳೇ ಕಳ್ಳಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ‌ ತೆಗೆದಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ, ಸಿಎಂ ಇದಕ್ಕೆ ಪ್ರೇರೆಪಣೆ. ಚುನಾವಣೆ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪ್ರಾಮಾಣಿಕವಾಗಿ ಎಸ್​ಐಆರ್​ ಮಾಡಬೇಕು ಎಂದು ಒತ್ತಾಯಿಸಿದರು.

ಮುತುವರ್ಜಿ ವಹಿಸಿ ಎಸ್​ಐಆರ್​ನಲ್ಲಿ ಸರಿಯಾಗಿ ಮಾಹಿತಿ ಕೊಡಿ ಅಂತ ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಮತದಾರರ ಲಿಸ್ಟ್​ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಈ ದೊಡ್ಡ ಜಾಹೀರಾತಿನ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್​ಐಆರ್​ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದರು.

Related Posts

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…

ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?

ನಾವು ಪ್ರತಿದಿನ ಹಲವರಿಗೆ ಫೋನ್ ಮಾಡುತ್ತೇವೆ. ಒಂದು ಅಂಕಿ ಕಡಿಮೆಯಾದರೂ ಕರೆ ಕನೆಕ್ಟ್ ಆಗುವುದಿಲ್ಲ. ಆದರೆ, ನಮ್ಮ ದೇಶದಲ್ಲಿ ಮೊಬೈಲ್ ಸಂಖ್ಯೆಗಳು 8 ಅಥವಾ 9 ಅಂಕಿಗಳಿರದೆ, 10 ಅಂಕಿಗಳೇ ಏಕೆ ಇರುತ್ತವೆ? ಈ ನಿರ್ಧಾರವನ್ನು ಯಾರು ತಗೆದುಕೊಂಡಿದ್ದಾರೆ ಮತ್ತು ಇದರ…

You Missed

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?

ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !