ಮಡಿಕೇರಿ ವಿರಾಜಪೇಟೆ ಬಳಿಯ ಅರಣ್ಯ ಪ್ರದೇಶದಲ್ಲಿ ಭೂ ಕುಸಿತ!

ಮಡಿಕೇರಿ : ವಿರಾಜ ಪೇಟೆ ತಾಲೂಕು ಮಾಕುಟ್ಟ ಅರಣ್ಯವಲ ಯಕ್ಕೆ ಸೇರಿದ ಮಾಂಟ್ರಿಬೀಟ್ನ ಪಾಲಂ ಗಾಲ ಮಲೆತಿರಿಕೆ ಈಶ್ವರ ದೇವಸ್ಥಾನ ದಿಂದ ಸುಮಾರು 5ಕಿ.ಮೀ. ಅಂತರದ ಆರಣ್ಯ ಪ್ರದೇಶದಲ್ಲಿ ಭೂ ಕುಸಿತ ಸಂಭವಿ ಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನಾಲ್ಕು ದಿನದ ಹಿಂದೆ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಆ ಸಂದರ್ಭದಲ್ಲಿ ಭೂ ಕುಸಿತವಾಗಿರುವ ಸಾಧ್ಯತೆ ಇದ್ದು, ಶುಕ್ರವಾರ ಬೆಳಗ್ಗೆ ಈ ಭೂ ಕುಸಿತ ಅರಣ್ಯ ಸಿಬ್ಬಂದಿಯ ಗಮನಕ್ಕೆ ಬಂದಿದೆ.

ಅರಣ್ಯದ ಮಧ್ಯ ಭಾಗದಲ್ಲಿ ಭೂ ಕುಸಿತ ವಾಗಿದ್ದು, ಸುಮಾರು 15 ಕಿ.ಮೀ. ವ್ಯಾಪ್ತಿ ಯಲ್ಲಿ ಜನ ವಸತಿ ಪ್ರದೇಶ ಇಲ್ಲದ ಕಾರಣ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಆದರೆ ಈ ಅರಣ್ಯಕ್ಕೆ ಕೆಳ ಭಾಗದಲ್ಲಿ ಕೊಳಕೇರಿ ಗ್ರಾಮದ ಕನ್ನಂಬೀರ ಪವನ್ ಪೂವಯ್ಯ ಎಂಬವರ ಕಾಫಿ ತೋಟ ದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಜ್ವಲ್ ಕುಮಾರ್ ಹಿಡಿದು ರಕ್ಷಿಸಿದರು.

ಕಂದಾಯ ಇಲಾಖೆಗೆ ಸೇರಿದ ಸುಮಾರು 300 ಎಕರೆಯಷ್ಟು ಪೈಸಾರಿ ಭೂಮಿ ಇದ್ದು, ಭೂ ಕುಸಿತ ಹಾಗೂ ಭಾರೀ ಪ್ರಮಾಣದ ನೀರು ಬೆಟ್ಟದಿಂದ ಹರಿದು ಬಂದ ಪರಿಣಾಮ ಪೈಸಾರಿ ಭೂಮಿಯಲ್ಲಿ ಭಾರೀ ಪ್ರಮಾಣದ ಮಣ್ಣು, ಮರಗಳು ಹಾಗೂ ಕಲ್ಲು-ಬಂಡೆಗಳು ಬಿದ್ದಿವೆ.

ಭೂ ಕುಸಿತ ಉಂಟಾದ ಜಾಗದಲ್ಲಿ ನೀರು ಉಕ್ಕಿ ಹರಿಯುತ್ತಿದೆ ಬೆಳಗ್ಗೆ ಮಾಹಿತಿ ತಿಳಿದೊಡನೆ ಅರಣ್ಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ವಿರಾಜಪೇಟೆ ಕಂದಾಯ ಇಲಾಖಾಧಿಕಾರಿ ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶಕ್ಕೆ ರಸ್ತೆ ಮಾರ್ಗ ವಿಲ್ಲದ ಕಾರಣ ಪಾಲಂಗಾಲ ಗ್ರಾಮದಿಂದ ಸುಮಾರು 8 ಕಿ.ಮೀ.ನಷ್ಟು ಬೆಟ್ಟ ಹತ್ತಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

ಬೆಟ್ಟದ ತುದಿಯವರೆಗೂ ನಾವು ಹೋಗಲು ಸಾಧ್ಯವಾಗಿಲ್ಲ. ನಾಳೆ ಮಾಕುಟ್ಟಿ ವಲಯ ಅರಣ್ಯಾಧಿಕಾರಿಗಳನ್ನೊಳಗೊಂಡ ತಂಡ ಮತ್ತೆ ಆ ಪ್ರದೇ ಶಕ್ಕೆ ತೆರಳಲಿದೆ. ಭಾರೀ ಮಳೆಯಿಂದಾಗಿ ಬೆಟ್ಟದ ಕಲ್ಲು-ಬಂಡೆಗಳ ಮೇಲಿರುವ ಮಣ್ಣು ಕುಸಿದಿದೆಯೇ ಹೊರತು, ಇದನ್ನು ಭೂ ಕುಸಿತ ಎಂದು ಪರಿಗಣಿಸಲು ಸಾಧ್ಯವಿಲ್ಲ. – ಜಗನ್ನಾಥ್ ಜಗನ್ನಾಥ್, ಡಿಎಫ್ಓ ತಿಳಿಸಿದ್ದಾರೆ.

2019ರ ಆಗಸ್ಟ್ನಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ವೇಳೆ ಕೆದಮಳ್ಳೂರು ತೋರಾ ಗ್ರಾಮದ ಬಳಿ ಭೂ ಕುಸಿತದಿಂದ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ಸ್ಥಳದಿಂದ ಸುಮಾರು 20 ಕಿಮೀ ಅಂತರದ ಅರಣ್ಯದ ಮಧ್ಯ ಭಾಗದಲ್ಲಿ ಈ ಭೂ ಕುಸಿತ ಸಂಭವಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!