ಮಡಿಕೇರಿ ವಿರಾಜಪೇಟೆ ಬಳಿಯ ಅರಣ್ಯ ಪ್ರದೇಶದಲ್ಲಿ ಭೂ ಕುಸಿತ!

ಮಡಿಕೇರಿ : ವಿರಾಜ ಪೇಟೆ ತಾಲೂಕು ಮಾಕುಟ್ಟ ಅರಣ್ಯವಲ ಯಕ್ಕೆ ಸೇರಿದ ಮಾಂಟ್ರಿಬೀಟ್ನ ಪಾಲಂ ಗಾಲ ಮಲೆತಿರಿಕೆ ಈಶ್ವರ ದೇವಸ್ಥಾನ ದಿಂದ ಸುಮಾರು 5ಕಿ.ಮೀ. ಅಂತರದ ಆರಣ್ಯ ಪ್ರದೇಶದಲ್ಲಿ ಭೂ ಕುಸಿತ ಸಂಭವಿ ಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನಾಲ್ಕು ದಿನದ ಹಿಂದೆ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಆ ಸಂದರ್ಭದಲ್ಲಿ ಭೂ ಕುಸಿತವಾಗಿರುವ ಸಾಧ್ಯತೆ ಇದ್ದು, ಶುಕ್ರವಾರ ಬೆಳಗ್ಗೆ ಈ ಭೂ ಕುಸಿತ ಅರಣ್ಯ ಸಿಬ್ಬಂದಿಯ ಗಮನಕ್ಕೆ ಬಂದಿದೆ.

ಅರಣ್ಯದ ಮಧ್ಯ ಭಾಗದಲ್ಲಿ ಭೂ ಕುಸಿತ ವಾಗಿದ್ದು, ಸುಮಾರು 15 ಕಿ.ಮೀ. ವ್ಯಾಪ್ತಿ ಯಲ್ಲಿ ಜನ ವಸತಿ ಪ್ರದೇಶ ಇಲ್ಲದ ಕಾರಣ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಆದರೆ ಈ ಅರಣ್ಯಕ್ಕೆ ಕೆಳ ಭಾಗದಲ್ಲಿ ಕೊಳಕೇರಿ ಗ್ರಾಮದ ಕನ್ನಂಬೀರ ಪವನ್ ಪೂವಯ್ಯ ಎಂಬವರ ಕಾಫಿ ತೋಟ ದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಜ್ವಲ್ ಕುಮಾರ್ ಹಿಡಿದು ರಕ್ಷಿಸಿದರು.

ಕಂದಾಯ ಇಲಾಖೆಗೆ ಸೇರಿದ ಸುಮಾರು 300 ಎಕರೆಯಷ್ಟು ಪೈಸಾರಿ ಭೂಮಿ ಇದ್ದು, ಭೂ ಕುಸಿತ ಹಾಗೂ ಭಾರೀ ಪ್ರಮಾಣದ ನೀರು ಬೆಟ್ಟದಿಂದ ಹರಿದು ಬಂದ ಪರಿಣಾಮ ಪೈಸಾರಿ ಭೂಮಿಯಲ್ಲಿ ಭಾರೀ ಪ್ರಮಾಣದ ಮಣ್ಣು, ಮರಗಳು ಹಾಗೂ ಕಲ್ಲು-ಬಂಡೆಗಳು ಬಿದ್ದಿವೆ.

ಭೂ ಕುಸಿತ ಉಂಟಾದ ಜಾಗದಲ್ಲಿ ನೀರು ಉಕ್ಕಿ ಹರಿಯುತ್ತಿದೆ ಬೆಳಗ್ಗೆ ಮಾಹಿತಿ ತಿಳಿದೊಡನೆ ಅರಣ್ಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ವಿರಾಜಪೇಟೆ ಕಂದಾಯ ಇಲಾಖಾಧಿಕಾರಿ ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶಕ್ಕೆ ರಸ್ತೆ ಮಾರ್ಗ ವಿಲ್ಲದ ಕಾರಣ ಪಾಲಂಗಾಲ ಗ್ರಾಮದಿಂದ ಸುಮಾರು 8 ಕಿ.ಮೀ.ನಷ್ಟು ಬೆಟ್ಟ ಹತ್ತಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

ಬೆಟ್ಟದ ತುದಿಯವರೆಗೂ ನಾವು ಹೋಗಲು ಸಾಧ್ಯವಾಗಿಲ್ಲ. ನಾಳೆ ಮಾಕುಟ್ಟಿ ವಲಯ ಅರಣ್ಯಾಧಿಕಾರಿಗಳನ್ನೊಳಗೊಂಡ ತಂಡ ಮತ್ತೆ ಆ ಪ್ರದೇ ಶಕ್ಕೆ ತೆರಳಲಿದೆ. ಭಾರೀ ಮಳೆಯಿಂದಾಗಿ ಬೆಟ್ಟದ ಕಲ್ಲು-ಬಂಡೆಗಳ ಮೇಲಿರುವ ಮಣ್ಣು ಕುಸಿದಿದೆಯೇ ಹೊರತು, ಇದನ್ನು ಭೂ ಕುಸಿತ ಎಂದು ಪರಿಗಣಿಸಲು ಸಾಧ್ಯವಿಲ್ಲ. – ಜಗನ್ನಾಥ್ ಜಗನ್ನಾಥ್, ಡಿಎಫ್ಓ ತಿಳಿಸಿದ್ದಾರೆ.

2019ರ ಆಗಸ್ಟ್ನಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ವೇಳೆ ಕೆದಮಳ್ಳೂರು ತೋರಾ ಗ್ರಾಮದ ಬಳಿ ಭೂ ಕುಸಿತದಿಂದ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ಸ್ಥಳದಿಂದ ಸುಮಾರು 20 ಕಿಮೀ ಅಂತರದ ಅರಣ್ಯದ ಮಧ್ಯ ಭಾಗದಲ್ಲಿ ಈ ಭೂ ಕುಸಿತ ಸಂಭವಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!