ಮಡಿಕೇರಿ ವಿರಾಜಪೇಟೆ ಬಳಿಯ ಅರಣ್ಯ ಪ್ರದೇಶದಲ್ಲಿ ಭೂ ಕುಸಿತ!

ಮಡಿಕೇರಿ : ವಿರಾಜ ಪೇಟೆ ತಾಲೂಕು ಮಾಕುಟ್ಟ ಅರಣ್ಯವಲ ಯಕ್ಕೆ ಸೇರಿದ ಮಾಂಟ್ರಿಬೀಟ್ನ ಪಾಲಂ ಗಾಲ ಮಲೆತಿರಿಕೆ ಈಶ್ವರ ದೇವಸ್ಥಾನ ದಿಂದ ಸುಮಾರು 5ಕಿ.ಮೀ. ಅಂತರದ ಆರಣ್ಯ ಪ್ರದೇಶದಲ್ಲಿ ಭೂ ಕುಸಿತ ಸಂಭವಿ ಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನಾಲ್ಕು ದಿನದ ಹಿಂದೆ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಆ ಸಂದರ್ಭದಲ್ಲಿ ಭೂ ಕುಸಿತವಾಗಿರುವ ಸಾಧ್ಯತೆ ಇದ್ದು, ಶುಕ್ರವಾರ ಬೆಳಗ್ಗೆ ಈ ಭೂ ಕುಸಿತ ಅರಣ್ಯ ಸಿಬ್ಬಂದಿಯ ಗಮನಕ್ಕೆ ಬಂದಿದೆ.

ಅರಣ್ಯದ ಮಧ್ಯ ಭಾಗದಲ್ಲಿ ಭೂ ಕುಸಿತ ವಾಗಿದ್ದು, ಸುಮಾರು 15 ಕಿ.ಮೀ. ವ್ಯಾಪ್ತಿ ಯಲ್ಲಿ ಜನ ವಸತಿ ಪ್ರದೇಶ ಇಲ್ಲದ ಕಾರಣ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಆದರೆ ಈ ಅರಣ್ಯಕ್ಕೆ ಕೆಳ ಭಾಗದಲ್ಲಿ ಕೊಳಕೇರಿ ಗ್ರಾಮದ ಕನ್ನಂಬೀರ ಪವನ್ ಪೂವಯ್ಯ ಎಂಬವರ ಕಾಫಿ ತೋಟ ದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಜ್ವಲ್ ಕುಮಾರ್ ಹಿಡಿದು ರಕ್ಷಿಸಿದರು.

ಕಂದಾಯ ಇಲಾಖೆಗೆ ಸೇರಿದ ಸುಮಾರು 300 ಎಕರೆಯಷ್ಟು ಪೈಸಾರಿ ಭೂಮಿ ಇದ್ದು, ಭೂ ಕುಸಿತ ಹಾಗೂ ಭಾರೀ ಪ್ರಮಾಣದ ನೀರು ಬೆಟ್ಟದಿಂದ ಹರಿದು ಬಂದ ಪರಿಣಾಮ ಪೈಸಾರಿ ಭೂಮಿಯಲ್ಲಿ ಭಾರೀ ಪ್ರಮಾಣದ ಮಣ್ಣು, ಮರಗಳು ಹಾಗೂ ಕಲ್ಲು-ಬಂಡೆಗಳು ಬಿದ್ದಿವೆ.

ಭೂ ಕುಸಿತ ಉಂಟಾದ ಜಾಗದಲ್ಲಿ ನೀರು ಉಕ್ಕಿ ಹರಿಯುತ್ತಿದೆ ಬೆಳಗ್ಗೆ ಮಾಹಿತಿ ತಿಳಿದೊಡನೆ ಅರಣ್ಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ವಿರಾಜಪೇಟೆ ಕಂದಾಯ ಇಲಾಖಾಧಿಕಾರಿ ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶಕ್ಕೆ ರಸ್ತೆ ಮಾರ್ಗ ವಿಲ್ಲದ ಕಾರಣ ಪಾಲಂಗಾಲ ಗ್ರಾಮದಿಂದ ಸುಮಾರು 8 ಕಿ.ಮೀ.ನಷ್ಟು ಬೆಟ್ಟ ಹತ್ತಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

ಬೆಟ್ಟದ ತುದಿಯವರೆಗೂ ನಾವು ಹೋಗಲು ಸಾಧ್ಯವಾಗಿಲ್ಲ. ನಾಳೆ ಮಾಕುಟ್ಟಿ ವಲಯ ಅರಣ್ಯಾಧಿಕಾರಿಗಳನ್ನೊಳಗೊಂಡ ತಂಡ ಮತ್ತೆ ಆ ಪ್ರದೇ ಶಕ್ಕೆ ತೆರಳಲಿದೆ. ಭಾರೀ ಮಳೆಯಿಂದಾಗಿ ಬೆಟ್ಟದ ಕಲ್ಲು-ಬಂಡೆಗಳ ಮೇಲಿರುವ ಮಣ್ಣು ಕುಸಿದಿದೆಯೇ ಹೊರತು, ಇದನ್ನು ಭೂ ಕುಸಿತ ಎಂದು ಪರಿಗಣಿಸಲು ಸಾಧ್ಯವಿಲ್ಲ. – ಜಗನ್ನಾಥ್ ಜಗನ್ನಾಥ್, ಡಿಎಫ್ಓ ತಿಳಿಸಿದ್ದಾರೆ.

2019ರ ಆಗಸ್ಟ್ನಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ವೇಳೆ ಕೆದಮಳ್ಳೂರು ತೋರಾ ಗ್ರಾಮದ ಬಳಿ ಭೂ ಕುಸಿತದಿಂದ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ಸ್ಥಳದಿಂದ ಸುಮಾರು 20 ಕಿಮೀ ಅಂತರದ ಅರಣ್ಯದ ಮಧ್ಯ ಭಾಗದಲ್ಲಿ ಈ ಭೂ ಕುಸಿತ ಸಂಭವಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!