2024ರ ಜುಲೈನಲ್ಲಿ ಸಂಭವಿಸಿದ ಭೂಕುಸಿತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು, ಆ ದುರಂತದಲ್ಲಿ ಸುಮಾರು 298 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಮತ್ತೆ ಅದೇ ರೀತಿಯ ಅವಘಡ ಮರುಕಳಿಸಿದ್ದು, ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.
ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ. ಸುರಂಗ ಮಾರ್ಗದ ಕಾಮಗಾರಿ ಸ್ಥಳದ ಮೇಲೆ ಮಣ್ಣಿನ ರಾಶಿ ಕುಸಿದು ಕಾರ್ಮಿಕರಿದ್ದ ಬಸ್ಗಳು ಹೂತುಹೋಗಿವೆ. ಭಾರೀ ಮಳೆಯ ನಡುವೆ ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮುಖ್ಯಮಂತ್ರಿ ಸತೀಶನ್ ತುರ್ತು ಸಭೆ ಕರೆದಿದ್ದು, ಸಚಿವರು ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿದ್ದಾರೆ.
ಕೇರಳದ ವಯನಾಡಿನಲ್ಲಿ ಮತ್ತೊಂದು ಭೀಕರ ಭೂಕುಸಿತ ಸಂಭವಿಸಿದೆ. ಅನಕ್ಕಂಫೊಯಿಲ್-ಕಲ್ಲಾಡಿ-ಮೇಪ್ಪಾಡಿ ಅವಳಿ ಸುರಂಗ ಮಾರ್ಗದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ನಡೆದಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು ಏಳು ಮಂದಿ ಮಣ್ಣಿನಡಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ. ಕನಿಷ್ಠ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರೆಡ್ ಅಲರ್ಟ್ ಘೋಷಣೆ
ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಯನಾಡ್ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಜಾರಿಯಲ್ಲಿದೆ. ಕೇವಲ ಒಂದು ದಿನದಲ್ಲಿ ವೈಥಿರಿಯಲ್ಲಿ 123 ಮಿ.ಮೀ ಮಳೆಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ತುರ್ತು ಸಭೆ ಕರೆದಿದ್ದಾರೆ. ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಸಚಿವರಾದ ಟಿ. ಸಿದ್ದಿಕ್ ಮತ್ತು ಎ.ಪಿ. ಅನಿಲ್ ಕುಮಾರ್ ಅವರಿಗೆ ಸ್ಥಳಕ್ಕೆ ತೆರಳಿ ಉಸ್ತುವಾರಿ ನೋಡಿಕೊಳ್ಳುವಂತೆ ಆದೇಶಿಸಿದ್ದಾರೆ. ಕಲ್ಪೆಟ್ಟಾದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ.





ಪೊಲೀಸರ ವಿರುದ್ಧ ವರ್ಷಾ ಹರೀಶ್ಗೌಡ ಬೇಸರ
ಮೈಸೂರು, ಜು.7, 2026: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅಶ್ಲೀಲ ಕಮೆಂಟ್ ಹಾಕಿದ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದರು, ಪೊಲೀಸರು ಈವರೆಗೂ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಅವರ ಪತ್ನಿ ವರ್ಷ ಹರೀಶ್…