ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸುವ ಭೀತಿ: ತಡೆಗೋಡೆಯಲ್ಲಿ ಭಾರೀ ಬಿರುಕು.!

ಮಡಿಕೇರಿ : ಮಡಿಕೇರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ 2018ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ. ವೆಚ್ಚದಲ್ಲಿ ಬೃಹತ್ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು.

ಆದರೆ, ಈ ತಡೆಗೋಡೆ ನಿರ್ಮಾಣವಾಗಿ ಒಂದು ಮಳೆಗಾಲ ಕಳೆಯುವುದರ ಒಳಗೆಯೇ ಬಿರುಕು ಬಿಟ್ಟು ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ಮಡಿಕೇರಿ ನಗರದಿಂದ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿ ಈ ಹೆದ್ದಾರಿ ತಡೆಗೋಡೆ ಬಾಯ್ಬಿಟ್ಟು ಕುಳಿತಿದೆ. ಸುಮಾರು ನಾಲ್ಕು ಹಂತಗಳಲ್ಲಿ 80 ಮೀಟರ್ ಎತ್ತರದಲ್ಲಿ ಈ ತಡೆಗೋಡೆಯನ್ನು ಬಲಿಷ್ಠವಾಗಿ ಕಟ್ಟಲಾಗಿದೆ. ಆದರೆ, ನೀರು ಮತ್ತು ಮಣ್ಣಿನ ವಿಪರೀತ ಒತ್ತಡದಿಂದ ಈ ತಡೆಗೋಡೆ ಬಿರುಕು ಬಿಟ್ಟಿದೆ. ಸದ್ಯಕ್ಕೆ ಹೆದ್ದಾರಿಗೆ ಯಾವುದೇ ಅಪಾಯ ಇಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.

https://www.youtube.com/live/piuKXId_P5I?si=NEkWIYd3geJR59Xq  🔴LIVE | ಟ್ರೇಡಿಂಗ್ ಹೆಸರಲ್ಲಿ ರಾಜಕುಮಾರನನ್ನು ಬಲೆಗೆ ಕೆಡವಿದ ಸುಂದರಿ,ಲಾವಣ್ಯ ಎಂಬಾಕೆಯಿಂದ ಮೋಸ ಮಾಡಿರುವ ಆರೋಪ

ಸ್ಥಳೀಯ ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ


ತಡೆಗೋಡೆಯ ಕೆಳಗೆ ಹಲವು ಮನೆಗಳಿದ್ದು ಎಲ್ಲಾ ಮನೆಗಳೂ ಅಪಾಯಕ್ಕೆ ಸಿಲುಕಿವೆ. ತಡೆಗೋಡೆ ಕುಸಿದು ಹೋದರೆ ಮನೆಗಳು ಮತ್ತು ಅವುಗಳಲ್ಲಿರುವ ನಿವಾಸಿಗಳೂ ಅಪಾಯಕ್ಕೆ ಸಿಲುಕಲಿದ್ದಾರೆ. ಹಾಗಾಗಿ ಈ ನಿವಾಸಿಗಳ ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿದೆ. ತಡೆಗೋಡೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ಗಳು ಸ್ಥಳ ಪರಿಶೀಲನೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಸದ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಣ ಮಾಡಿದ್ದಾರೆ. ಇದರಿಂದ ಸಂಚಾರಕ್ಕೆ ಅಡಚಣೆ ಯಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!