ಶಿರಾಡಿ ಘಾಟ್‌ನಲ್ಲಿ ಭೂಕುಸಿತದಿಂದ ಕಾರುಗಳ ಮೇಲೆ ಬಿದ್ದ ಮರ

ಗುಂಡ್ಯ (ದಕ್ಷಿಣ ಕನ್ನಡ): ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಶನಿವಾರ ಸಂಜೆ ಬೃಹತ್​ ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದು, ಎರಡು ಕಾರುಗಳಿಗೆ ಹಾನಿಯಾಗಿದೆ. ಘಟನೆಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಶನಿವಾರ ಸಂಜೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗಲೇ ಎರಡು ಕಾರುಗಳ ಮೇಲೆ ದಿಢೀರ್ ಮರಗಳು ​​ ಉರುಳಿ ಬಿದ್ದಿವೆ. ಇದರಿಂದ ವಾಹನಗಳು ತೀವ್ರ ಹಾನಿಗೊಳಗಾದರೂ, ಅದೃಷ್ಟವಶಾತ್ ಕಾರಿನಲ್ಲಿದ್ದವರು ಚಿಕ್ಕಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಈ ಹಿನ್ನೆಲೆಯಲ್ಲಿ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಸ್ತೆಯುದ್ದಕ್ಕೂ ನೂರಾರು ವಾಹನಗಳು ಎರಡೂ ಬದಿಯಲ್ಲಿ ಸಿಲುಕಿಕೊಂಡಿವೆ. ಸವಾರರು ಮಳೆಯಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ತುರ್ತು ಸಿಬ್ಬಂದಿ ಧಾವಿಸಿದ್ದು, ರಸ್ತೆ ತೆರವು ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ. ಮರಗಳನ್ನು ಕತ್ತರಿಸಿ ತೆರವುಗೊಳಿಸುವ ಕಾರ್ಯ ರಾತ್ರಿಯೂ ಮುಂದುವರೆದಿದೆ. ಸದ್ಯಕ್ಕೆ ಬೆಂಗಳೂರು-ಮಂಗಳೂರು ಪ್ರಯಾಣಿಕರು ಶಿರಾಡಿ ಘಾಟ್​ ಮಾರ್ಗದ ಬದಲಿಗೆ, ಚಾರ್ಮಾಡಿ ಘಾಟ್​ ಅಥವಾ ಬಿಸಿಲೆ ಘಾಟ್​, ಮಡಿಕೇರಿ ಮೂಲಕ ಪ್ರಯಾಣ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಸಾರ್ವಜನಿಕರಿಗೆ ಅನಗತ್ಯವಾಗಿ ಘಾಟ್ ಮಾರ್ಗಗಳಲ್ಲಿ ಸಂಚಾರ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಸಕಲೇಶಪುರ ಹಾಗೂ ನೆಲ್ಯಾಡಿ ಗ್ರಾಮಾಂತರ ಪೊಲೀಸರು, ಸಕಲೇಶಪುರ ಉಪ ವಿಭಾಗಾಧಿಕಾರಿಗಳು ಹಾಗೂ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್, ಮಾರನಹಳ್ಳಿ ಉಪ ವಲಯ ಅರಣ್ಯಾಧಿಕಾರಿ ಮಹದೇವ್, ಕೆಂಪುಹೊಳೆ ಬೀಟ್‌ನ ಅರಣ್ಯ ವೀಕ್ಷಕ ಲೋಕೇಶ್ ಇತರ ಸಿಬ್ಬಂದಿ ಮರಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮತ್ತೊಂದೆಡೆ, ಶನಿವಾರ ಸಂಜೆ ಘಾಟಿ ರೈಲು ಮಾರ್ಗದಲ್ಲಿಯೂ ಭೂಕುಸಿತ ಸಂಭವಿಸಿದ್ದು, ಕೆಲ ರೈಲುಗಳ ಮಾರ್ಗದಲ್ಲಿ ತುರ್ತು ಬದಲಾವಣೆ ಮಾಡಲಾಗಿದೆ. ಸಿರಿಬಾಗಿಲು-ಯಡಕುಮಾರಿ, ಕಡಗರವಳ್ಳಿ, ದೋಣಿಗಲ್ ವಿಭಾಗಗಳ ನಡುವೆ ಭೂ ಕುಸಿತಗೊಂಡಿದೆ. ಮಂಗಳೂರು–ವಿಜಯಪುರ (07378) ವಿಶೇಷ ಎಕ್ಸ್‌ಪ್ರೆಸ್, ಮುರ್ಡೇಶ್ವರ–ಎಸ್‌ಎಂವಿಟಿ ಬೆಂಗಳೂರು ರೈಲು, ಕಣ್ಣೂರು–ಕೆಎಸ್‌ಆರ್ ಬೆಂಗಳೂರು (16512) ರೈಲು ಹಾಗೂ ಕಾರವಾರ–ಕೆಎಸ್‌ಆರ್ ಬೆಂಗಳೂರು (16596) ರೈಲುಗಳ ಮಾರ್ಗ ಬದಲಾಗಿದೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

ಮೈಸೂರು : RTI ಕಾರ್ಯಕರ್ತ ಗಂಗರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!