ಶಿರಾಡಿ ಘಾಟ್‌ನಲ್ಲಿ ಭೂಕುಸಿತದಿಂದ ಕಾರುಗಳ ಮೇಲೆ ಬಿದ್ದ ಮರ

ಗುಂಡ್ಯ (ದಕ್ಷಿಣ ಕನ್ನಡ): ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಶನಿವಾರ ಸಂಜೆ ಬೃಹತ್​ ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದು, ಎರಡು ಕಾರುಗಳಿಗೆ ಹಾನಿಯಾಗಿದೆ. ಘಟನೆಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಶನಿವಾರ ಸಂಜೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗಲೇ ಎರಡು ಕಾರುಗಳ ಮೇಲೆ ದಿಢೀರ್ ಮರಗಳು ​​ ಉರುಳಿ ಬಿದ್ದಿವೆ. ಇದರಿಂದ ವಾಹನಗಳು ತೀವ್ರ ಹಾನಿಗೊಳಗಾದರೂ, ಅದೃಷ್ಟವಶಾತ್ ಕಾರಿನಲ್ಲಿದ್ದವರು ಚಿಕ್ಕಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಈ ಹಿನ್ನೆಲೆಯಲ್ಲಿ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಸ್ತೆಯುದ್ದಕ್ಕೂ ನೂರಾರು ವಾಹನಗಳು ಎರಡೂ ಬದಿಯಲ್ಲಿ ಸಿಲುಕಿಕೊಂಡಿವೆ. ಸವಾರರು ಮಳೆಯಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ತುರ್ತು ಸಿಬ್ಬಂದಿ ಧಾವಿಸಿದ್ದು, ರಸ್ತೆ ತೆರವು ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ. ಮರಗಳನ್ನು ಕತ್ತರಿಸಿ ತೆರವುಗೊಳಿಸುವ ಕಾರ್ಯ ರಾತ್ರಿಯೂ ಮುಂದುವರೆದಿದೆ. ಸದ್ಯಕ್ಕೆ ಬೆಂಗಳೂರು-ಮಂಗಳೂರು ಪ್ರಯಾಣಿಕರು ಶಿರಾಡಿ ಘಾಟ್​ ಮಾರ್ಗದ ಬದಲಿಗೆ, ಚಾರ್ಮಾಡಿ ಘಾಟ್​ ಅಥವಾ ಬಿಸಿಲೆ ಘಾಟ್​, ಮಡಿಕೇರಿ ಮೂಲಕ ಪ್ರಯಾಣ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಸಾರ್ವಜನಿಕರಿಗೆ ಅನಗತ್ಯವಾಗಿ ಘಾಟ್ ಮಾರ್ಗಗಳಲ್ಲಿ ಸಂಚಾರ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಸಕಲೇಶಪುರ ಹಾಗೂ ನೆಲ್ಯಾಡಿ ಗ್ರಾಮಾಂತರ ಪೊಲೀಸರು, ಸಕಲೇಶಪುರ ಉಪ ವಿಭಾಗಾಧಿಕಾರಿಗಳು ಹಾಗೂ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್, ಮಾರನಹಳ್ಳಿ ಉಪ ವಲಯ ಅರಣ್ಯಾಧಿಕಾರಿ ಮಹದೇವ್, ಕೆಂಪುಹೊಳೆ ಬೀಟ್‌ನ ಅರಣ್ಯ ವೀಕ್ಷಕ ಲೋಕೇಶ್ ಇತರ ಸಿಬ್ಬಂದಿ ಮರಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮತ್ತೊಂದೆಡೆ, ಶನಿವಾರ ಸಂಜೆ ಘಾಟಿ ರೈಲು ಮಾರ್ಗದಲ್ಲಿಯೂ ಭೂಕುಸಿತ ಸಂಭವಿಸಿದ್ದು, ಕೆಲ ರೈಲುಗಳ ಮಾರ್ಗದಲ್ಲಿ ತುರ್ತು ಬದಲಾವಣೆ ಮಾಡಲಾಗಿದೆ. ಸಿರಿಬಾಗಿಲು-ಯಡಕುಮಾರಿ, ಕಡಗರವಳ್ಳಿ, ದೋಣಿಗಲ್ ವಿಭಾಗಗಳ ನಡುವೆ ಭೂ ಕುಸಿತಗೊಂಡಿದೆ. ಮಂಗಳೂರು–ವಿಜಯಪುರ (07378) ವಿಶೇಷ ಎಕ್ಸ್‌ಪ್ರೆಸ್, ಮುರ್ಡೇಶ್ವರ–ಎಸ್‌ಎಂವಿಟಿ ಬೆಂಗಳೂರು ರೈಲು, ಕಣ್ಣೂರು–ಕೆಎಸ್‌ಆರ್ ಬೆಂಗಳೂರು (16512) ರೈಲು ಹಾಗೂ ಕಾರವಾರ–ಕೆಎಸ್‌ಆರ್ ಬೆಂಗಳೂರು (16596) ರೈಲುಗಳ ಮಾರ್ಗ ಬದಲಾಗಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!