ಕೇರಳದಲ್ಲಿ ಮ್ಯಾಚ್ ಆಡಲಿರುವ ಲಿಯೋನೆಲ್ ಮೆಸ್ಸಿ ಟೀಮ್

ವರ್ಲ್ಡ್​ ಫುಟ್​ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಕ್ಟೋಬರ್​ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಅರ್ಜೆಂಟೀನಾದ ಫುಟ್​ಬಾಲ್ ಅಸೋಸಿಯೇಷನ್ (ಎಎಫ್​ಎ)​ ಅಧಿಕೃತವಾಗಿ ಮಾಹಿತಿ ನೀಡಿದೆ.

ಫುಟ್​ಬಾಲ್ ಐಕಾನ್​ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ನವೆಂಬರ್​ 10 ರಿಂದ 18ರ ವರೆಗೆ ಭಾರತದ ಪ್ರವಾಸದಲ್ಲಿ ಇರುತ್ತಾರೆ. ಈ ವೇಳೆ ಕೇರಳ ಸರ್ಕಾರ ಹಾಗೂ ರಿಪೋರ್ಟರ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ಸಹಭಾಗಿತ್ವದಲ್ಲಿ ಫುಟ್​ಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗುತ್ತದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ನಡೆಯುವ ಈ ಮಹತ್ವದ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಖಾಡಕ್ಕೆ ಇಳಿಯಲಿದ್ದಾರೆ. ಇದು ಭಾರತದ ಫುಫ್​ಬಾಲ್ ಅಭಿಮಾನಿಗಳಿಗೆ ಐತಿಹಾಸಿಕ ಕ್ಷಣವಾಗಿರಲಿದೆ ಎಂದು ಹೇಳಲಾಗಿದೆ.

ಲಿಯೋನೆಲ್ ಮೆಸ್ಸಿ ಅವರು ಕೇರಳಕ್ಕೆ ಭೇಟಿ ನೀಡುತ್ತಾರೋ, ಇಲ್ವೋ ಎನ್ನುವ ಅನುಮಾನವಿತ್ತು. ಇನ್ನು ಫಿಫಾ ಟ್ರೋಫಿಯಲ್ಲಿ ಅರ್ಜೆಂಟೀನಾ ಟೀಮ್ ಪಾಲ್ಗೊಳ್ಳುವುದರಿಂದ ಕೇರಳಕ್ಕೆ ಪ್ರಯಾಣಿಸುವುದಿಲ್ಲ ಎನ್ನಲಾಗಿತ್ತು. ಆದರೆ ರಿಪೋರ್ಟರ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ, ಸಂಪಾದಕ ಆಂಟೊ ಆಗಸ್ಟೀನ್ ಅವರು ಇದನ್ನ ತಳ್ಳಿ ಹಾಕಿದ್ದರು. ಅದರಂತೆ ಇದೀಗ ಎಎಫ್​ಎ ಅಧಿಕೃತವಾಗಿ ಮಾಹಿತಿ ನೀಡಿದ್ದರಿಂದ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ಟೀಮ್ ಕೇರಳಕ್ಕೆ ಭೇಟಿ ನೀಡುವುದಷ್ಟೇ ಅಲ್ಲ, ಫುಟ್​ಬಾಲ್ ಪಂದ್ಯ ಕೂಡ ಆಡಲಿದೆ ಎನ್ನುವುದು ಅಭಿಮಾನಿಗಳಿಗೆ ಸಂತಸವನ್ನು ಮತ್ತಷ್ಟು ಹೆಚ್ಚು ಮಾಡಿದೆ.

2022ರಲ್ಲಿ ಕತಾರ್​ನಲ್ಲಿ ನಡೆದಂತಹ ವಿಶ್ವಕಪ್​ ಫುಟ್​ಬಾಲ್​ ಟೂರ್ನಿಯಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಅವರ ಅರ್ಜೆಂಟೀನಾ ಟೀಮ್​ಗೆ ಕೇರಳಿಗರು ದೊಡ್ಡ ಮಟ್ಟದಲ್ಲಿ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಟೂರ್ನಿಯಲ್ಲಿ ಅರ್ಜೆಂಟೀನಾ ವರ್ಲ್ಡ್​ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಕಾರಣದಿಂದಲೇ ಅವರು ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಆ ತಂಡ ಭೇಟಿ ನೀಡುವುದನ್ನು ಈ ಹಿಂದೆಯೇ ಕೇರಳದ ಕ್ರೀಡಾ ಸಚಿವ ವಿ ಅಬ್ದುರಹಿಮಾನ್ ಅವರು ಸ್ಪಷ್ಟ ಪಡಿಸಿದ್ದರು.

 

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!