ಆಧುನಿಕ ಶಾಲೆಯ ಲೋಗೋ ಲಾಂಚ್ ಮಾಡಿದ ಮಹಾಯೋಗಿಗಳು

ಆಧುನಿಕ AI ತಂತ್ರಜ್ಞಾನದೊಂದಿಗೆ ಓಡುತ್ತಿರುವ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನ ನಡೆಸಬೇಕಾಗಿರುವ ಮುಂದಿನ ಪೀಳಿಗೆಯ ಮಕ್ಕಳಿಗಾಗಿ ತಂತ್ರಜ್ಞಾನ ಹಾಗೂ ಸಂಸ್ಕೃತಿಯನ್ನು ಒಳಗೊಂಡಿರುವ ಸಫಿಶಿಯೆಂಟ್ ಕಿಡ್ಸ್ ಅಕಾಡೆಮಿ ಎಂಬ ಪ್ರಿ ಸ್ಕೂಲ್ ಶಾಲೆಯೊಂದು 2025ರ ಶೈಕ್ಷಣಿಕ ವರ್ಷದಲ್ಲಿ ಮೈಸೂರಿನ ಬಳ್ಳಾಲ್ ವೃತ್ತದ ಬಳಿ ಇರುವ ಕೃಷ್ಣಮೂರ್ತಿಪುರಂನಲ್ಲಿ ಪ್ರಾರಂಭಗೊಳ್ಳುತ್ತಿದೆ.

ಸಫಿಶಿಯಂಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ವತಿಯಿಂದ 2025ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಗೊಳ್ಳುತ್ತಿರುವ ಮೈಸೂರಿನ ನೂತನ ವಿದ್ಯಾಸಂಸ್ಥೆಯಾದ ಸಫಿಶಿಯಂಟ್ ಕಿಡ್ಸ್ ಅಕಾಡೆಮಿಯ “ಲೋಗೋ ಲಾಂಚ್” ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ತೀರದ ಪೂರ್ವವಾಹಿನಿಯಲ್ಲಿರುವ ಶ್ರೀ ದುರ್ದುಂಡೇಶ್ವರ ಮಹಾಂತ ಶಿವಯೋಗಿಗಳ ಮಠದ ಡಿ.ಎಂ.ಎಸ್ ಚಂದ್ರಮನ ಆಶ್ರಮದಲ್ಲಿ ಆಯೋಜಿಸಲಾಗಿತ್ತು.ಶ್ರೀ ಮಠದ ಸಂಸ್ಥಾಪಕರಾದ ಶಾ.ಪ.ಪೂ. ಲಿಂ. ಶ್ರೀ ಶ್ರೀ ಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ ಕೃಪಾಶೀರ್ವಾದದೊಂದಿಗೆ ಶ್ರೀ ಶ್ರೀ ಮಹಾಂತ ಶಿವಯೋಗಿ ಮಹಾಸ್ವಾಮಿಗಳು ಸಫಿಶಿಯೆಂಟ್ ಕಿಡ್ಸ್ ಅಕಾಡೆಮಿ ಸಂಸ್ಥೆಯ ಲೋಗೋ ಅನಾವರಣವನ್ನು ನೆರವೇರಿಸಿದರು.

ಲೋಗೋ ಅನಾವರಣಗೊಳಿಸಿ ಮಾತನಾಡಿದ ಮಹಾ ಸ್ವಾಮೀಜಿ ರವರು, AI ಯುಗದಲ್ಲಿ ಬಾಲ್ಯದಲ್ಲಿಯೇ ಮಕ್ಕಳ ವಿದ್ಯಾಭ್ಯಾಸವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಾಗೂ ನಮ್ಮ ಮಣ್ಣಿನ ಸಿರಿ ಸಂಸ್ಕೃತಿಯನ್ನು ಬಾಲ್ಯದಿಂದಲೇ ಕಲಿಸುವ ಉದ್ದೇಶದೊಂದಿಗೆ ಸಂಸ್ಥೆಯು ಪ್ಲೇ ಗ್ರೂಪ್, ನರ್ಸರಿ, ಜೂನಿಯರ್ ಕೆಜಿ ಹಾಗೂ ಸೀನಿಯರ್ ಕೆಜಿ ತರಗತಿಗಳೊಂದಿಗೆ ಸಾಂಸ್ಕೃತಿಕ ನಗರಿ ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿ ಪ್ರಾರಂಭಗೊಳ್ಳುತ್ತಿರುವುದು ಸಂತೋಷದ ವಿಷಯವಾಗಿದ್ದು, ಸಂಸ್ಥೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಆಶೀರ್ವದಿಸಿದರು.

ಈ ಕಾರ್ಯಕ್ರಮದಲ್ಲಿ ಸಫಿಶಿಯೆಂಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಫಿಶಿಯನ್ ಕಿಡ್ಸ್ ಅಕಾಡೆಮಿಯ ಅಧ್ಯಕ್ಷರು ಆದ ಅಲೋಕ್ ವರದರಾಜ್ ರವರು, ಸಫಿಶಿಯನ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ನಿಮಿಷಾಂಬರವರು ಸೇರಿದಂತೆ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಇತರರು ಹಾಜರಿದ್ದರು.

Related Posts

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

    ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು