ಆಧುನಿಕ ಶಾಲೆಯ ಲೋಗೋ ಲಾಂಚ್ ಮಾಡಿದ ಮಹಾಯೋಗಿಗಳು

ಆಧುನಿಕ AI ತಂತ್ರಜ್ಞಾನದೊಂದಿಗೆ ಓಡುತ್ತಿರುವ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನ ನಡೆಸಬೇಕಾಗಿರುವ ಮುಂದಿನ ಪೀಳಿಗೆಯ ಮಕ್ಕಳಿಗಾಗಿ ತಂತ್ರಜ್ಞಾನ ಹಾಗೂ ಸಂಸ್ಕೃತಿಯನ್ನು ಒಳಗೊಂಡಿರುವ ಸಫಿಶಿಯೆಂಟ್ ಕಿಡ್ಸ್ ಅಕಾಡೆಮಿ ಎಂಬ ಪ್ರಿ ಸ್ಕೂಲ್ ಶಾಲೆಯೊಂದು 2025ರ ಶೈಕ್ಷಣಿಕ ವರ್ಷದಲ್ಲಿ ಮೈಸೂರಿನ ಬಳ್ಳಾಲ್ ವೃತ್ತದ ಬಳಿ ಇರುವ ಕೃಷ್ಣಮೂರ್ತಿಪುರಂನಲ್ಲಿ ಪ್ರಾರಂಭಗೊಳ್ಳುತ್ತಿದೆ.

ಸಫಿಶಿಯಂಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ವತಿಯಿಂದ 2025ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಗೊಳ್ಳುತ್ತಿರುವ ಮೈಸೂರಿನ ನೂತನ ವಿದ್ಯಾಸಂಸ್ಥೆಯಾದ ಸಫಿಶಿಯಂಟ್ ಕಿಡ್ಸ್ ಅಕಾಡೆಮಿಯ “ಲೋಗೋ ಲಾಂಚ್” ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ತೀರದ ಪೂರ್ವವಾಹಿನಿಯಲ್ಲಿರುವ ಶ್ರೀ ದುರ್ದುಂಡೇಶ್ವರ ಮಹಾಂತ ಶಿವಯೋಗಿಗಳ ಮಠದ ಡಿ.ಎಂ.ಎಸ್ ಚಂದ್ರಮನ ಆಶ್ರಮದಲ್ಲಿ ಆಯೋಜಿಸಲಾಗಿತ್ತು.ಶ್ರೀ ಮಠದ ಸಂಸ್ಥಾಪಕರಾದ ಶಾ.ಪ.ಪೂ. ಲಿಂ. ಶ್ರೀ ಶ್ರೀ ಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ ಕೃಪಾಶೀರ್ವಾದದೊಂದಿಗೆ ಶ್ರೀ ಶ್ರೀ ಮಹಾಂತ ಶಿವಯೋಗಿ ಮಹಾಸ್ವಾಮಿಗಳು ಸಫಿಶಿಯೆಂಟ್ ಕಿಡ್ಸ್ ಅಕಾಡೆಮಿ ಸಂಸ್ಥೆಯ ಲೋಗೋ ಅನಾವರಣವನ್ನು ನೆರವೇರಿಸಿದರು.

ಲೋಗೋ ಅನಾವರಣಗೊಳಿಸಿ ಮಾತನಾಡಿದ ಮಹಾ ಸ್ವಾಮೀಜಿ ರವರು, AI ಯುಗದಲ್ಲಿ ಬಾಲ್ಯದಲ್ಲಿಯೇ ಮಕ್ಕಳ ವಿದ್ಯಾಭ್ಯಾಸವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಾಗೂ ನಮ್ಮ ಮಣ್ಣಿನ ಸಿರಿ ಸಂಸ್ಕೃತಿಯನ್ನು ಬಾಲ್ಯದಿಂದಲೇ ಕಲಿಸುವ ಉದ್ದೇಶದೊಂದಿಗೆ ಸಂಸ್ಥೆಯು ಪ್ಲೇ ಗ್ರೂಪ್, ನರ್ಸರಿ, ಜೂನಿಯರ್ ಕೆಜಿ ಹಾಗೂ ಸೀನಿಯರ್ ಕೆಜಿ ತರಗತಿಗಳೊಂದಿಗೆ ಸಾಂಸ್ಕೃತಿಕ ನಗರಿ ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿ ಪ್ರಾರಂಭಗೊಳ್ಳುತ್ತಿರುವುದು ಸಂತೋಷದ ವಿಷಯವಾಗಿದ್ದು, ಸಂಸ್ಥೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಆಶೀರ್ವದಿಸಿದರು.

ಈ ಕಾರ್ಯಕ್ರಮದಲ್ಲಿ ಸಫಿಶಿಯೆಂಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಫಿಶಿಯನ್ ಕಿಡ್ಸ್ ಅಕಾಡೆಮಿಯ ಅಧ್ಯಕ್ಷರು ಆದ ಅಲೋಕ್ ವರದರಾಜ್ ರವರು, ಸಫಿಶಿಯನ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ನಿಮಿಷಾಂಬರವರು ಸೇರಿದಂತೆ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಇತರರು ಹಾಜರಿದ್ದರು.

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!