ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ.

ಮೈಸೂರು: ಕಾರಣಾಂತರಗಳಿಂದ ಪದವಿ ಅಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾಲಯ ಮತ್ತೊಂದು ಅವಕಾಶ ನೀಡಿದೆ. ಹೌದು, ಕೆಲ ವಿದ್ಯಾರ್ಥಿಗಳು ಬೇರೆ ಬೇರೆ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗದೆ ಪದವಿ ಪೂರ್ಣಗೊಳಿಸಲು ಸಾಧ್ಯವಾಗಿರುವುದಿಲ್ಲ. ಇದರಿಂದ ಪದವಿ ಪಡೆಯಬೇಕೆಂಬ ಅವರ ಕನಸು ನನಸಾಗದೆ ಉಳಿದಿದೆ. ಇಂತಹ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರೆಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲು ಮೈಸೂರು ವಿವಿ ನಿರ್ಧರಿಸಿದೆ.

ಯಾರಿಗೆಲ್ಲ ಅವಕಾಶ

“2004-05ನೇ ಸಾಲಿನಿಂದ 2018-19ನೇ ಅವಧಿಯ ಪಠ್ಯಕ್ರಮದಲ್ಲಿ ಮೂರು ವರ್ಷದ ಪದವಿ ಅವಧಿಯನ್ನು ಮುಗಿಸಿದ್ದರೂ ನಾನಾ ಕಾರಣದಿಂದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ/ಬಿ.ಬಿ.ಎಂ, ಬಿ.ಎಸ್.ಡಬ್ಯೂ ಸೇರಿದಂತೆ ವಿವಿಧ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ಮೈಸೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳು ಹಾಗೂ ಸಂಯೋಜನೆ ಪಡೆದಿರುವ ಸರ್ಕಾರಿ, ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ಮೂರು ವರ್ಷದ ಪದವಿಯ ಆರು ಸೆಮಿಸ್ಟರ್ಗಳ ಪೈಕಿ ಯಾವುದೇ ಸೆಮಿಸ್ಟರ್ಸ್ ಯಾವುದೇ ವಿಷಯದಲ್ಲಿ ಅನುತ್ತೀರ್ಣರಾಗಿದ್ದರೂ, ಆಯಾ ವಿಷಯಗಳ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆ” ಎಂದು ವಿವಿ ಕಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ.
“ಈ ಬಗ್ಗೆ ವಿಶ್ವವಿದ್ಯಾನಿಯವು ಶೀರ್ಘದಲ್ಲೇ ಸುತ್ತೋಲೆ ಹೊರಡಿಸಲಿದ್ದು, ಪರೀಕ್ಷೆ ಬರೆಯಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಈ ಹಿಂದೆ ತಾವು ವ್ಯಾಸಂಗ ಮಾಡಿರುವ ಕಾಲೇಜಿನಲ್ಲಿ ಪರೀಕ್ಷಾ ಶುಲ್ಕ ಪಾವತಿಸಬೇಕಾಗುತ್ತದೆ. ಮೈಸೂರು ನಗರವನ್ನು ಕೇಂದ್ರವಾಗಿಸಿಕೊಂಡು ನಾಲ್ಕು ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರದ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ”.

“ಈ ಅವಕಾಶದಿಂದ ವಂಚಿತರಾಗದಂತೆ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ಈಗಾಗಲೇ ನಾಲ್ಕು ಜಿಲ್ಲೆಯ (ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ) ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಲಾಗಿದೆ. ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆದು ಪದವಿ ಪೂರ್ಣಗೊಳಿಸದೆ ಇರುವ ವಿದ್ಯಾರ್ಥಿಗಳ ಮಾಹಿತಿಯನ್ನು (ಹೆಸರು, ರಿ.ನಂ, ವಿಷಯ, ತರಗತಿ, ಪದವಿ ಪೂರ್ಣಗೊಳಿಸಿದ ಅವಧಿ ಇತ್ಯಾದಿ) ಸಂಗ್ರಹಿಸಿ ಮೈಸೂರು ವಿಶ್ವವಿದ್ಯಾಲಯಕ್ಕೆ ನೀಡಲು ಸೂಚಿಸಲಾಗಿದೆ”.
“ಜಿಲ್ಲೆಗೊಂದು ವಿಶ್ವವಿದ್ಯಾಲಯವಾಗಿರುವುದರಿಂದ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಎಲ್ಲಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಗೊಂದಲ ಬಹುತೇಕ ವಿದ್ಯಾರ್ಥಿಗಳಲ್ಲಿದೆ. ಕೆಲವರು ಪದವಿ ಪೂರ್ಣಗೊಳ್ಳದ ಕಾರಣ ಕಾಲೇಜುಗಳ ಸಂಪರ್ಕದಿಂದ ದೂರ ಉಳಿದಿರುತ್ತಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿರುವ ಸಮಸ್ಯೆಗಳನ್ನು ಪದವಿ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಾಪಕರು ಹೆಚ್ಚಿನ ಆಸಕ್ತಿ ವಹಿಸಿ ಎಲ್ಲರಿಗೂ ತಿಳಿಯುವಂತೆ ಮಾಹಿತಿಯನ್ನು ನೀಡಬೇಕಾಗಿರುತ್ತದೆ. ಈ ಪರೀಕ್ಷೆಗಳನ್ನು ಮಾನಸಗಂಗೋತ್ರಿಯ ಮೌಲ್ಯಭವನದಲ್ಲಿ ಜೂನ್/ಜುಲೈ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿರುತ್ತದೆ”.

“ಒಂದು ಬಾರಿ ಮಾತ್ರ ಅವಕಾಶ ನೀಡಲಾಗಿದೆ. ವಿಶೇಷವಾಗಿ ಕೈಗೊಂಡಿರುವ ಈ ಪರೀಕ್ಷಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸುವ ಹಾಗೂ ವಿದ್ಯಾರ್ಥಿಗಳು ಇದರಿಂದಾಗುವ ಉತ್ತಮ ಅವಕಾಶವನ್ನು ಪಡೆದುಕೊಳ್ಳುವ ಸಂಬಂಧ, ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಜಿ.ಹೆಚ್.ಮಹದೇವ ಸ್ವಾಮಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವರ ಮೊಬೈಲ್ ಸಂಖ್ಯೆ: 9035235245 ಹಾಗೂ ಕಚೇರಿ ಸಂಖ್ಯೆ: 0821-2419273 ಯನ್ನು ಸಂಪರ್ಕಿಸಬಹುದು” ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!