ವರಮಹಾಲಕ್ಷ್ಮೀ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.

ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.

ವಿದ್ಯೆಗೆ ಬ್ರಹ್ಮನ ಅರಸಿ ಸರಸ್ವತಿ ಅದಿದೇವತೆಯಾದರೆ, ಸುಖಃ ಮತ್ತು ಸಂಪತ್ತುಗಳಿಗೆ ವಿಷ್ಣುವಿನ ಪತ್ನಿ ಮಹಾ ಲಕ್ಶ್ಮೀಯೇ ಅಧಿದೇವತೆ. ಯಾರಿಗೆ ಲಕ್ಷ್ಮಿ ಚೆನ್ನಾಗಿ ಒಲಿದಿರುತ್ತಾಳೋ ಅಂತಹವರ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಇಂದಿನ ದಿನಗಳಲ್ಲಿ ಬಹುತೇಕರು ಸರಸ್ವತಿಗಿಂತ ಲಕ್ಷ್ಮಿಯನ್ನು ಒಲಿಸಿಕೊಳ್ಳಲೇ ಬಯಸುತ್ತಿರುವುದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯವಾಗಿದೆ. ಹಾಗಾಗಿ ಈ ಕಲಿಯುಗದಲ್ಲಿ ಯಾವುದೇ ಜಾತಿಗಳ ತಾರತಮ್ಯವಿಲ್ಲದೆ ಪೂಜಿಸುವ ಏಕೈಕ ದೇವತೆ ಲಕ್ಷ್ಮಿ ಎಂದರೆ ಅತಿಶಯೋಕ್ತಿಯೇನಲ್ಲ.

https://www.goodnews24x7.com/do-you-know-why-green-bangles-are-given-to-the-elders-on-the-day-of-varamahalakshmi-festival/ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ವರಮಹಾಲಕ್ಷ್ಮಿ ಹಬ್ಬದ ದಿನ ಈ ತಪ್ಪುಗಳು ನಿಮ್ಮಿಂದ ಆಗದಿರಲಿ:

• ವರಮಹಾಲಕ್ಷ್ಮಿ ಹಬ್ಬದ ದಿನ ಪೂಜೆ ಮಾಡುವ ಸ್ಥಳದಲ್ಲಿ ಅಥವಾ ದೇವರ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಇಡಬಾರದು.
• ವರಮಹಾಲಕ್ಷ್ಮಿ ಮರದ ಕುರ್ಚಿ ಮೇಲೆ ಕೂರಿಸಿ. ಅಪ್ಪಿತಪ್ಪಿಯೂ ಕಬ್ಬಿಣದ ಕುರ್ಚಿ ಮೇಲೆ ಲಕ್ಷ್ಮಿಯನ್ನು ಕೂರಿಸಿ ಪೂಜೆ ಮಾಡಬೇಡಿ.
• ಅಲಂಕಾರಕ್ಕಾಗಿ ಪ್ಲಾಸ್ಟಿಕ್ ಹೂವುಗಳು ಹಾಗೂ ಹಣ್ಣುಗಳನ್ನು ಬಳಸಿ ವರಮಹಾಲಕ್ಷ್ಮಿ ವ್ರತಾಚರಣೆ ಮಾಡಬೇಡಿ.
• ನೀವೇನಾದ್ರೂ ಕಲಶವಿಟ್ಟು ಪೂಜೆ ಮಾಡುತ್ತೀರಿ ಅಂತಾದರೆ ತ್ರಾಮದ ಕಲಶವನ್ನು ಬಳಸುವುದು ಸೂಕ್ತ. ಪೂಜೆಯ ವೇಳೆ ಮನಸ್ಸು ಶುದ್ಧವಾಗಿರಲಿ, ಕೆಟ್ಟ ಆಲೋಚನೆಗಳನ್ನು ಮಾಡಬೇಡಿ.
• ಈ ವ್ರತಾಚರಣೆಗೆ ಸಾಲವಾಗಿ ತಂದ ಹಣವನ್ನಾಗಲಿ ಹಾಗೂ ಆಭರಣಗಳನ್ನು ಬಳಸಬೇಡಿ. ಇದರಿಂದ ಲಕ್ಷ್ಮಿ ದೇವಿಯೂ ಮುನಿಸಿಕೊಳ್ಳುತ್ತಾಳೆ. ತುಕ್ಕು ಹಿಡಿದ ಆಭರಣಗಳನ್ನು ಎಂದಿಗೂ ಬಳಸುವುದು ತಪ್ಪಿಸಿ

Related Posts

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!