ವರಮಹಾಲಕ್ಷ್ಮೀ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.

ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.

ವಿದ್ಯೆಗೆ ಬ್ರಹ್ಮನ ಅರಸಿ ಸರಸ್ವತಿ ಅದಿದೇವತೆಯಾದರೆ, ಸುಖಃ ಮತ್ತು ಸಂಪತ್ತುಗಳಿಗೆ ವಿಷ್ಣುವಿನ ಪತ್ನಿ ಮಹಾ ಲಕ್ಶ್ಮೀಯೇ ಅಧಿದೇವತೆ. ಯಾರಿಗೆ ಲಕ್ಷ್ಮಿ ಚೆನ್ನಾಗಿ ಒಲಿದಿರುತ್ತಾಳೋ ಅಂತಹವರ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಇಂದಿನ ದಿನಗಳಲ್ಲಿ ಬಹುತೇಕರು ಸರಸ್ವತಿಗಿಂತ ಲಕ್ಷ್ಮಿಯನ್ನು ಒಲಿಸಿಕೊಳ್ಳಲೇ ಬಯಸುತ್ತಿರುವುದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯವಾಗಿದೆ. ಹಾಗಾಗಿ ಈ ಕಲಿಯುಗದಲ್ಲಿ ಯಾವುದೇ ಜಾತಿಗಳ ತಾರತಮ್ಯವಿಲ್ಲದೆ ಪೂಜಿಸುವ ಏಕೈಕ ದೇವತೆ ಲಕ್ಷ್ಮಿ ಎಂದರೆ ಅತಿಶಯೋಕ್ತಿಯೇನಲ್ಲ.

https://www.goodnews24x7.com/do-you-know-why-green-bangles-are-given-to-the-elders-on-the-day-of-varamahalakshmi-festival/ವರಮಹಾಲಕ್ಷ್ಮಿ ಹಬ್ಬದ ದಿನ ಮುತ್ತೈದೆಯರಿಗೆ ಹಸಿರು ಬಣ್ಣದ ಬಳೆಯನ್ನೇ ಕೊಡುವುದೇಕೆ ಗೊತ್ತಾ?

ವರಮಹಾಲಕ್ಷ್ಮಿ ಹಬ್ಬದ ದಿನ ಈ ತಪ್ಪುಗಳು ನಿಮ್ಮಿಂದ ಆಗದಿರಲಿ:

• ವರಮಹಾಲಕ್ಷ್ಮಿ ಹಬ್ಬದ ದಿನ ಪೂಜೆ ಮಾಡುವ ಸ್ಥಳದಲ್ಲಿ ಅಥವಾ ದೇವರ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಇಡಬಾರದು.
• ವರಮಹಾಲಕ್ಷ್ಮಿ ಮರದ ಕುರ್ಚಿ ಮೇಲೆ ಕೂರಿಸಿ. ಅಪ್ಪಿತಪ್ಪಿಯೂ ಕಬ್ಬಿಣದ ಕುರ್ಚಿ ಮೇಲೆ ಲಕ್ಷ್ಮಿಯನ್ನು ಕೂರಿಸಿ ಪೂಜೆ ಮಾಡಬೇಡಿ.
• ಅಲಂಕಾರಕ್ಕಾಗಿ ಪ್ಲಾಸ್ಟಿಕ್ ಹೂವುಗಳು ಹಾಗೂ ಹಣ್ಣುಗಳನ್ನು ಬಳಸಿ ವರಮಹಾಲಕ್ಷ್ಮಿ ವ್ರತಾಚರಣೆ ಮಾಡಬೇಡಿ.
• ನೀವೇನಾದ್ರೂ ಕಲಶವಿಟ್ಟು ಪೂಜೆ ಮಾಡುತ್ತೀರಿ ಅಂತಾದರೆ ತ್ರಾಮದ ಕಲಶವನ್ನು ಬಳಸುವುದು ಸೂಕ್ತ. ಪೂಜೆಯ ವೇಳೆ ಮನಸ್ಸು ಶುದ್ಧವಾಗಿರಲಿ, ಕೆಟ್ಟ ಆಲೋಚನೆಗಳನ್ನು ಮಾಡಬೇಡಿ.
• ಈ ವ್ರತಾಚರಣೆಗೆ ಸಾಲವಾಗಿ ತಂದ ಹಣವನ್ನಾಗಲಿ ಹಾಗೂ ಆಭರಣಗಳನ್ನು ಬಳಸಬೇಡಿ. ಇದರಿಂದ ಲಕ್ಷ್ಮಿ ದೇವಿಯೂ ಮುನಿಸಿಕೊಳ್ಳುತ್ತಾಳೆ. ತುಕ್ಕು ಹಿಡಿದ ಆಭರಣಗಳನ್ನು ಎಂದಿಗೂ ಬಳಸುವುದು ತಪ್ಪಿಸಿ

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!